ನೀಲಿ ಚಿತ್ರಕ್ಕೂ ಶೃಂಗಾರ ಚಿತ್ರಕ್ಕೂ ವ್ಯತ್ಯಾಸವಿದೆ ಎಂದು ಪತಿಯನ್ನು ಸಮರ್ಥಿಸಿಕೊಂಡ ಶಿಲ್ಪಾ ಶೆಟ್ಟಿ

 

ಮುಂಬೈ: ನೀಲಿಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​​ ಕುಂದ್ರಾ ಜು.27ರವರೆಗೆ ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಪತಿ ಬಂಧನದ ಬಗ್ಗೆ ಶಿಲ್ಪಾ ಶೆಟ್ಟಿ ಮೌನ ಮುರಿದಿದ್ದಾರೆ. ನನ್ನ ಪತಿ ಮುಗ್ಧ ಹಾಗೂ ನಿರಪರಾಧಿ. ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ. ಇನ್ನು ನೀಲಿಚಿತ್ರಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ನಿನ್ನೆ ಪ್ರಕರಣ ಸಂಬಂಧ ರಾಜ್​​ ಕುಂದ್ರಾ-ಶಿಲ್ಪಾ ಶೆಟ್ಟಿ ಮುಂಬೈ ನಿವಾಸಕ್ಕೆ ಭೇಟಿ ನೀಡಿದ್ದ ಕ್ರೈಂ ಬ್ರಾಂಚ್​ ಪೊಲೀಸರು 6 ಗಂಟೆಗಳ ಕಾಲ ಮನೆಯಲ್ಲಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಶಿಲ್ಪಾರಿಂದ ಪೊಲೀಸರು ಹೇಳಿಕೆಯನ್ನು ಪಡೆದಿದ್ದಾರೆ.
ನನ್ನ ಗಂಡ ಮುಗ್ಧ, ಅವರು ನಡೆಸುತ್ತಿದ್ದರು ಎಂದು ಆರೋಪಿಸಿಲಾಗಿರುವ ಹಾಟ್​​ಶಾಟ್​ ಆ್ಯಪ್​​​ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪೋರ್ನ್​ ವಿಡಿಯೋ ನಿರ್ಮಾಣದಲ್ಲಿ ನನ್ನ ಪತಿ ಭಾಗಿಯಾಗಿಲ್ಲ. ಇನ್ನು ಕಾಮೋದ್ರೇಕ ಚಿತ್ರಗಳಿಗು ನೀಲಿಚಿತ್ರಗಳಿಗೂ ವ್ಯತ್ಯಾಸವಿದೆ ಎಂದೂ ಶಿಲ್ಪಾ ಈ ವೇಳೆ ಹೇಳಿದ್ದಾರೆ ಎನ್ನಲಾಗುತ್ತಿದೆ. ಪರೋಕ್ಷವಾಗಿ ಪತಿ ರಾಜ್​ಕುಂದ್ರಾರನ್ನು ಶಿಲ್ಪಾ ಸಮರ್ಥಿಸಿಕೊಂಡಿದ್ದಾರೆ.
ಇನ್ನು ರಾಜ್​​ ಕುಂದ್ರಾ ಸಂಬಂಧಿ ಪ್ರದೀಪ್​ ಭಕ್ಷಿ ಆ್ಯಪ್​​ ನಡೆಸುತ್ತಿದ್ದಾರೆ. ಇದರಲ್ಲಿ ರಾಜ್​​ಕುಂದ್ರಾ ಪಾತ್ರವಿಲ್ಲ. ಲಂಡನ್​ ಮೂಲದ ವ್ಯಕ್ತಿ ದ್ವೇಷಪೂರಿತವಾಗಿ ನನ್ನ ಪತಿ ವಿರುದ್ಧ ಆರೋಪ ಮಾಡಿದ್ದಾರೆ. ಅನಗತ್ಯವಾಗಿ ನನ್ನ ಪತಿಯನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಶಿಲ್ಪಾ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಆದರೆ ಪೊಲೀಸರು ಇಡೀ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪಾತ್ರ ಇದೆಯೇ ಎಂಬ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಶಿಲ್ಪಾ ಇದೊಂದು ಕೆಟ್ಟ ಘಳಿಗೆ ಆದಷ್ಟು ಬೇಗ ಮುಗಿಯಲಿದೆ ಎಂದಿದ್ದಾರೆ. ಶಿಲ್ಪಾ ಸೋದರಿ ಶಮಿತಾ ಕೂಡ ಭಾವ ರಾಜ್​ಕುಂದ್ರಾ ಇನೋಸೆಂಟ್​​​ ಎಂದು ಹೇಳಿದ್ದಾರೆ. ಆದರೆ ಬಾಲಿವುಡ್​ನ ಹಲವು ನಟಿಯರು ರಾಜ್​​ ಕುಂದ್ರಾ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ರಾಜ್​ಕುಂದ್ರಾ ಬಂಧನವಾದಗಿನಿಂದ ಹಲವು ವಿಷಯಗಳು ಬಯಲಾಗುತ್ತಲೇ ಇವೆ.

Indresh KC

Recent Posts

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

22 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

34 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

54 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

1 hour ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 hours ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 hours ago