ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ನಟ ದುನಿಯಾ ವಿಜಯ್ ಮೇಲೆ ಎಫ್ ಐಆರ್ ದಾಖಲಾಗಿದೆ. ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ಸಾವನ್ನಪ್ಪಿದ್ದ ಖಳ ನಟರಾದ ಅನಿಲ್ ಮತ್ತು ಉದಯ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸುಂದರ್ ಪಿ.ಗೌಡ ಮೇಲೆ ರಾಮನಗರ ಜೆ.ಎಂ.ಎಫ್.ಸಿ ಕೋರ್ಟ್ ನಿಂದ ವಾರೆಂಟ್ ನ್ನು ಜಾರಿ ಮಾಡಲಾಗಿತ್ತು.
ವಾರೆಂಟ್ ಹಿಡಿದುಕೊಂಡು ತಾವರೆಕೆರೆ ಪೊಲೀಸರು ನಿರ್ಮಾಪಕ ಸುಂದರ್ ಪಿ.ಗೌಡ ಅವರನ್ನು ಬಂಧಿಸಲು ಮುಂದಾದಗ ನಟ ವಿಜಯ್ ಪೊಲೀಸರನ್ನು ತಡೆದರು. ಈ ವೇಳೆ ನಿರ್ಮಾಪಕ ಸುಂದರ್ ಪಿ.ಗೌಡ ಮನೆಯಿಂದ ಪರಾರಿಯಾಗಿದ್ದಾರೆ. ಇದೀಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ತಾವರೆಕೆರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೋವಿಂದ ರಾಜು ದುನಿಯಾ ವಿಜಯ್ ವಿರುದ್ಧ ದೂರನ್ನ ನೀಡಿದ್ದಾರೆ. ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ ೩೬೩ ಎಫ್ ಐಆರ್ ದಾಖಲಾಗಿದೆ.
ಪೊಲೀಸ್- ದುನಿಯಾ ವಿಜಯ್ ಮಾತುಕತೆ: ಸುಂದರ್ ಪಿ.ಗೌಡ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ನಾಳೆ ಸುಂದರ್ ಪಿ ಅವರನ್ನು ಪೊಲೀಸ್ ಠಾಣೆಗೆ ಕರೆ ತರುತ್ತೇನೆ ಎಂದು ಹೇಳುವಷ್ಟರಲ್ಲಿ ನಿರ್ಮಾಪಕ ಸುಂದರ್ ಅಲ್ಲಿಂದ್ದ ಪರಾರಿಯಾಗಿದ್ದಾರೆ.