ನವದೆಹಲಿ: ಬ್ಲೂಫಿಲ್ಮ್ ದಂಧೆಯಲ್ಲಿ ಬಂಧನವಾಗಿರುವ ಉದ್ಯಮಿ ರಾಜ್ ಕುಂದ್ರಾ ಕುರಿತು ಪತ್ನಿ ಶಿಲ್ಪಾ ಶೆಟ್ಟಿ ಗುರುವಾರ ರಾತ್ರಿ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಲೇಖಕ ಜೇಮ್ಸ್ ಥರ್ಬರ್ ಪುಸ್ತಕದ ಪೇಜ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ.
ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೇಜ್ನ ಒಂದು ಭಾಗವನ್ನು ಉಲ್ಲೇಖಿಸಿದ್ದಾರೆ. ಅದರಲ್ಲಿ “ನಾವು ಇರಬೇಕಾದ ಸ್ಥಳವು ಇದೀಗ ಇಲ್ಲಿಯೇ ಇದೆ. ಏನಾಗಿದೆ ಅಥವಾ ಏನಾಗಿರಬಹುದು ಎಂದು ಆತಂಕದಿಂದ ನೋಡುತ್ತಿಲ್ಲ ಆದರೆ, ಯಾವುದು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿದೆ.” ಎಂದು ಬರೆಯಲಾಗಿದ್ದು, ಸವಾಲುಗಳನ್ನು ಎದುರಿಸುವ ಬಗ್ಗೆ ಮಾತನಾಡಿದ್ದಾರೆ. ನಾನು ಜೀವಂತವಾಗಿರುವುದು ಅದೃಷ್ಟ ಎಂದು ತಿಳಿದಾಗ ನಾನು ದೀರ್ಘ ಉಸಿರನ್ನು ತೆಗೆದುಕೊಂಡೆ. ಹಿಂದೆಯು ಸವಾಲುಗಳಿಂದಲೇ ಉಳಿದಿದ್ದೇನೆ ಮತ್ತು ಭವಿಷ್ಯದಲ್ಲೂ ಸವಾಲುಗಳಿಂದಲೇ ಉಳಿದುಕೊಳ್ಳುತ್ತೇವೆ. ಇಂದಿನ ನನ್ನ ಜೀವನವನ್ನು ತಡೆಯುವ ಯಾವುದರ ಬಗ್ಗೆಯೂ ನಾನು ಗಮನವಹಿಸುವುದಿಲ್ಲ ಎಂದಿದ್ದಾರೆ.
ಮುಂಬೈ ಪೊಲೀಸರ ಪ್ರಕಾರ ಬ್ಲೂ ಫಿಲ್ಮ್ ದಂದೆಯಲ್ಲಿ ಪ್ರಮುಖ ಸಂಚುಗಾರ ರಾಜ್ ಕುಂದ್ರಾ. ಪೋರ್ನ್ ವಿಡಿಯೋಗಳನ್ನು ತಯಾರಿಸಿ ಅದನ್ನು ಬೇರೆ ದೇಶದ ವಿವಿಧ ಆ್ಯಪ್ಗಳಲ್ಲಿ ಅಪ್ಲೋಡ್ ಮಾಡಿರುವ ಗಂಭೀರ ಆರೋಪದ ಮೇಲೆ ರಾಜ್ ಕುಂದ್ರಾರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಯಾವುದೇ ಸಕ್ರಿಯ ಪಾತ್ರವಿಲ್ಲ ಎಂಬುದನ್ನು ತನಿಖೆಯಲ್ಲಿ ಬಹಿರಂಗವಾಗಿದೆ.
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…