ನವದೆಹಲಿ: ಈಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನ ಕ್ಯೂಟ್ ಜೋಡಿ ದೀಪಿಕಾ- ರಣವೀರ್ ಅವರು ಶುಕ್ರವಾರ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೀಪಿಕಾ ಅವರು ದೈವ ಭಕ್ತೆಯಾಗಿದ್ದು ತಮ್ಮ ಯಾವುದೇ ಚಿತ್ರ ಬಿಡುಗಡೆ ಅಥವಾ ಚಿತ್ರೀಕರಣದ ಸಂದರ್ಭದಲ್ಲಿ ದೇವರ ಮೊರೆ ಹೋಗುತ್ತಿದ್ದರು. ಈ ನಿಟ್ಟಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಹಿನ್ನೆಲೆ ನವ ವಧು ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಇಟಲಿಯಲ್ಲಿ ಅದ್ಧೂರಿ ವಿವಾಹ ನಡೆದ ಬಳಿಕ ದೀಪ್ ವೀರ್ ಅವರ ಮೊದಲ ಆರತಕ್ಷತೆ ಬೆಂಗಳೂರಿನಲ್ಲಿ ನಂತರ ಮುಂಬೈನಲ್ಲಿ ನಡೆಯಿತು. ಡಿಸೆಂಬರ್ 1ರಂದು ಮುಂಬೈನಲ್ಲಿ ಇವರ ಕೊನೆಯ ಆರತಕ್ಷತೆ ನಡೆಯಲಿದೆ.
ಇಟಲಿಯಲ್ಲಿ ದೀಪ್ ವೀರ್ ಅದ್ಧೂರಿ ವಿವಾಹವು ನವೆಂಬರ್ 14ರಂದು ಕೊಂಕಣಿ ಸಂಪ್ರದಾಯದಂತೆ ಹಾಗೂ 15ರಂದು ಸಿದ್ಧಿ ಸಂಪ್ರದಾಯದಂತೆ ನಡೆದಿದೆ. ಈ ಸಂಭ್ರಮದಲ್ಲಿ ದೀಪ್ ವೀರ್ ಹತ್ತಿರ ಸಂಬಂಧಿಗಳಿಗೆ ಮಾತ್ರ ಆಹ್ವಾನವನ್ನು ನೀಡಲಾಗಿತ್ತು.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…