Categories: ಮನರಂಜನೆ

ಮೇಘಾ ರವೀಂದ್ರಸ್ವಾಮಿ ಮುಡಿಗೆ ‘ಮಿಸೆಸ್ ಇಂಡಿಯಾ ಕರ್ನಾಟಕ’ ಕಿರೀಟ

ಬೆಂಗಳೂರು: ಇಲ್ಲಿನ ಯಲಹಂಕದಲ್ಲಿ ನಡೆದ ‘ಮಿಸೆಸ್ ಇಂಡಿಯಾ ಕರ್ನಾಟಕ–2021’ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೇಘಾ ರವೀಂದ್ರಸ್ವಾಮಿ ವಿಜೇತರಾಗಿದ್ದಾರೆ.

ಅಂತಿಮ ಸ್ಪರ್ಧೆಯಲ್ಲಿ ಒಟ್ಟು 25 ಗೃಹಿಣಿಯರು ಭಾಗವಹಿಸಿದ್ದರು. ಪ್ರಥಮ ಸ್ಥಾನದ ನಂತರದ ಸ್ಥಾನಗಳಿಗೆ ಕ್ರಮವಾಗಿ ಶ್ರದ್ಧಾ ದಾಮೋದರ್, ನವ್ಯಾಗೌಡ ಮತ್ತು ಶೀತಲ್ ನೆಟಲ್ ಕರ್, ಶಿಲ್ಪಾ ಶ್ರೀಧರ್ ಮತ್ತು ಅರ್ಚನಾ ಜಯರಾಮ್, ಡಾ.ಶ್ವೇತಾ ಜಕ್ಕಾ ಮತ್ತು ನೀತು ಆರ್. ಪ್ರಸನ್ನ ಆಯ್ಕೆಯಾದರು.

‘ಸೂಪರ್ ಕ್ಲಾಸಿಕ್ ವಿನ್ನರ್’ ವಿಭಾಗದಲ್ಲಿ ರಜಿನಿ ಲಕ್ಕಾ ಹಾಗೂ ‘ಕ್ಲಾಸಿಕ್ ವಿನ್ನರ್’ ವಿಭಾಗದಲ್ಲಿ ಶ್ರುತಿ ಶಿವಲಿಂಗಯ್ಯ ವಿಜೇತರಾದರು.

ಮಿಸೆಸ್ ಇಂಡಿಯಾ ಕರ್ನಾಟಕದಲ್ಲಿ ವಿಜೇತರಾದವರು ರಾಷ್ಟ್ರಮಟ್ಟದಲ್ಲಿ ದೀಪಾಲಿ ಫಡ್ನಿಸ್ ಆಯೋಜಿಸುವ ಮಿಸೆಸ್ ಇಂಡಿಯಾ ಸೌಂದರ್ಯ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ ಎಂದು ಮಿಸೆಸ್ ಇಂಡಿಯಾ ಕರ್ನಾಟಕ ಸ್ಪರ್ಧೆಯ ಆಯೋಜಕಿ ಪ್ರತಿಭಾ ಸಂಶಿಮಠ ತಿಳಿಸಿದರು.

Sampriya YK

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

17 mins ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

35 mins ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

56 mins ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

1 hour ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

2 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

2 hours ago