ಈಗಾಗಲೇ ನಿಶ್ಚಿತಾರ್ಥ ಕಾರ್ಯ ಮುಗಿಸಿರುವ ಚೆಲುವಿನ ಚಿತ್ತಾರ ಖ್ಯಾತಿಯ ನಟಿ ಅಮೂಲ್ಯ ಹಾಗೂ ಜಗದೀಶ್ ಅವರ ವಿವಾಹ ದಿನಾಂಕವೂ ಫಿಕ್ಸ್ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮೇ 12ರಂದು ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಅಮೂಲ್ಯ ಮತ್ತು ಜಗದೀಶ್ ಅವರ ಮದುವೆಯನ್ನು ನೆರವೇರಿಸುವುದಕ್ಕೆ ಎರಡೂ ಕುಟುಂಬಗಳು ನಿಶ್ಚಯಿಸಿವೆ. ಆದಿಚುಂಚನಗಿರಿ ಕ್ಷೇತ್ರದ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಅಮೂಲ್ಯ ಮತ್ತು ಜಗದೀಶ್ ಮದುವೆಯಾಗಲಿದ್ದಾರೆ. ಈ ಮದುವೆಯಲ್ಲಿ ಚಿತ್ರರಂಗದ ಸಾಕಷ್ಟು ಗಣ್ಯರು ಭಾಗವಹಿಸಲಿದ್ದಾರೆ. ರಾಜರಾಜೇಶ್ವರಿ ನಗರದ ಕಲ್ಯಾಣ ಮಂಟಪವೊಂದರಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅದಾದ ಐದು ದಿನಗಳಿಗೆ ಬೀಗರೂಟ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ.