ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಸಿಎಂ ಸಿದ್ದಾರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಕಿಚ್ಚ ಸುದೀಪ್ ಸಿಎಂಗೆ ಸ್ಯಾಂಡಲ್ ವುಡ್ ಕ್ರಿಕೆಟ್ ಟೂರ್ನಿಯ ಸಮಾರೋಪದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ್ದಾರೆ.
ನಂತರ ಸುದೀಪ್ ಹಾಗೂ ಸಿಎಂ ಸುಮಾರು ಅರ್ಧಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.
ಈ ಹಿಂದೆಯೂ ಕಿಚ್ಚ ಸುದೀಪ್ ಅವರು ಡಾ. ವಿಷ್ಣು ಸಮಾಧಿ ವಿಚಾರದ ಕುರಿತು ಸಿಎಂ ನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.