News Karnataka Kannada
Thursday, May 02 2024
ಮನರಂಜನೆ

ಸ್ಟಾರ್ ನಟನ ಪುತ್ರ ನಿಂದ ಯದ್ವಾ ತದ್ವಾ ಕಾರು ಚಾಲನೆ: ನಾಲ್ವರಿಗೆ ಗಾಯ

Photo Credit :

ಸ್ಟಾರ್ ನಟನ ಪುತ್ರ ನಿಂದ ಯದ್ವಾ ತದ್ವಾ ಕಾರು ಚಾಲನೆ: ನಾಲ್ವರಿಗೆ ಗಾಯ

ಚೆನ್ನೈ: ಕಾಲಿವುಡ್ ಸ್ಟಾರ್ ನಟ ವಿಕ್ರಮ್ ಮಗ ಧ್ರುವ ವಿಕ್ರಮ್ ಯದ್ವಾ ತದ್ವಾ ಕಾರು ಚಲಾಯಿಸಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಇನ್ನೂ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಆಟೋದ ಒಳಗಡೆ ಇದ್ದ ವ್ಯಕ್ತಿ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಗಾಯಗೊಂಡವರನ್ನು ಸ್ಥಳೀಯ ರೋಯಾಪಟ್ಟ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಈ ಘಟನೆ ಚೆನ್ನೈನ ತೇನಂಪೇಟೆಯ ಬಳಿ ಇರುವ ಪೊಲೀಸ್ ಕಮೀಷನರ್ ಮನೆಯ ವ್ಯಾಪ್ತಿಯಲ್ಲಿ ನಡೆಡಿದೆ. ನಂತರ ಧ್ರುವ ವಿಕ್ರಮ್ ಪೊಲೀಸರ ಜತೆ ವಾಗ್ವಾದ ಬೆಳೆಸಿದ್ದು ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಐಪಿಸಿ ಸೆಕ್ಷನ್ 279 (ನಿರ್ಲಕ್ಷ ಚಾಲನೆ), 337 ಅಡಿ ದೂರು ದಾಖಲಿಸಿದ್ದಾರೆ. ಸದ್ಯ ಧ್ರುವ ವಿಕ್ರಮ್ ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ. 

ಧ್ರುವ ವಿಕ್ರಮ್ ತೆಲುಗಿನ `ಅರ್ಜುನ್ ರೆಡ್ಡಿ’ ಸಿನಿಮಾ ತಮಿಳು ರಿಮೇಕ್ ನಲ್ಲಿ ಮೊದಲ ಬಾರಿಗೆ ಕಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು