Categories: ಮನರಂಜನೆ

‘ಸ್ವತಂತ್ರ ವೀರ್ ಸಾವರ್ಕರ್’: ಫಸ್ಟ್ ಲುಕ್ ಬಿಡುಗಡೆ

ಮುಂಬೈ: ವಿವಾದಾತ್ಮಕ ಬಲಪಂಥೀಯ ನಾಯಕ ವಿ.ಡಿ ಸಾವರ್ಕರ್ ಅವರ 139ನೇ ಜನ್ಮದಿನದಂದು ಅವರ ಜೀವನಾಧಾರಿತ ‘ಸ್ವತಂತ್ರ ವೀರ್ ಸಾವರ್ಕರ್’ ಚಿತ್ರದ ಫಸ್ಟ್ ಲುಕ್ ಹೊರಬಿದ್ದಿದೆ. ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ಬಾಲಿವುಡ್ ನಟ ರಣದೀಪ್ ಹೂಡಾ ನಟಿಸುತ್ತಿದ್ದಾರೆ.

ನಿರ್ಮಾಪಕ ಸಂದೀಪ್ ಸಿಂಗ್ ಮತ್ತು ಆನಂದ್ ಪಂಡಿತ್ ಅವರು ಸಾವರ್ಕರ್ ಚಿತ್ರವನ್ನು ನಿರ್ಮಿಸುತ್ತಿದ್ದು, ಇದನ್ನು ಮಹೇಶ್ ಮಂಜ್ರೇಕರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಆಗಸ್ಟ್ 2022 ರಿಂದ ಪ್ರಾರಂಭವಾಗಲಿದೆ.

ರಣದೀಪ್ ಹೂಡಾ-ಸಂದೀಪ್ ಸಿಂಗ್ ಈ ಹಿಂದೆ ‘ಸರಬ್ಜಿತ್’ ಸಿನಿಮಾಗೆ ಜೊತೆಯಾಗಿದ್ದರು. ಈ ಜೋಡಿ ಇದೀಗ ಸಾವರ್ಕರ್‌ ಚಿತ್ರಕ್ಕಾಗಿ ಮತ್ತೊಮ್ಮೆ ಜೊತೆಯಾಗಿದೆ. ಈ ಚಿತ್ರವು ಆಗಸ್ಟ್ 2022 ರಲ್ಲಿ ತೆರೆಗೆ ಬರಲಿದ್ದು, ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

‘ದಾವೂದ್ ಇಬ್ರಾಹಿಂ, ಹರ್ಷದ್ ಮೆಹ್ತಾ ಮತ್ತು ಲಲಿತ್ ಮೋದಿಯವರ ಮೇಲೆ ಚಲನಚಿತ್ರಗಳು ಬರುವಾಗ, ನಾವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರವನ್ನು ಯಾಕೆ ನಿರ್ಮಿಸಬಾರದು ‘ ಎಂದು ನಿರ್ಮಾಪಕ ಸಂದೀಪ್ ಸಿಂಗ್ ದಿ ಹಿಂದೂ ಜೊತೆಗೆ ಪ್ರಶ್ನಿಸಿದ್ದಾರೆ.

ಈ ಹಿಂದೆ, ಪ್ರಧಾನಿ ನರೇಂದ್ರ ಮೋದಿಯ ಚಿತ್ರವನ್ನು ನಿರ್ಮಿಸಲು ಇದೇ ನಿರ್ಮಾಪಕರು ಬಂಡವಾಳ ಹೂಡಿದ್ದರು. 2019 ರ ಚುನಾವಣೆಗೆ ಮುನ್ನ ಈ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಉದ್ದೇಶಿಸಿದ್ದರೂ, ಚುನಾವಣಾ ಆಯೋಗ ಅದಕ್ಕೆ ತಡೆಯೊಡ್ಡಿತ್ತು. ಇದೇ ನಿರ್ಮಾಪಕರು ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಬಗ್ಗೆ ಚಿತ್ರ ಮಾಡಲಿದ್ದಾರೆ ಎಂದು ದ ಹಿಂದೂ ವರದಿ ಮಾಡಿದೆ.

ಹಿಂದುತ್ವದ ನಿರೂಪಣೆಯನ್ನು ಉತ್ತೇಜಿಸುವ ಪ್ರಯತ್ನವಲ್ಲ ಎಂದು ಅವರು ಹೇಳಿದ್ದಾರೆ. “ಇದು ರಾಜಕಾರಣಿಯ ಕೆಲಸ, ಚಲನಚಿತ್ರ ತಯಾರಕರು ಹೇಳಬೇಕಾದ ಕಥೆಯನ್ನು ಹೇಳಲು ಬಯಸುತ್ತಾರೆ” ಎಂದು ಸಿಂಗ್‌ ಹೇಳಿದ್ದಾರೆ.

Ashika S

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

7 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

23 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

54 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago