ಮುಂಬೈ: ವಿವಾದಾತ್ಮಕ ಬಲಪಂಥೀಯ ನಾಯಕ ವಿ.ಡಿ ಸಾವರ್ಕರ್ ಅವರ 139ನೇ ಜನ್ಮದಿನದಂದು ಅವರ ಜೀವನಾಧಾರಿತ ‘ಸ್ವತಂತ್ರ ವೀರ್ ಸಾವರ್ಕರ್’ ಚಿತ್ರದ ಫಸ್ಟ್ ಲುಕ್ ಹೊರಬಿದ್ದಿದೆ. ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ಬಾಲಿವುಡ್ ನಟ ರಣದೀಪ್ ಹೂಡಾ ನಟಿಸುತ್ತಿದ್ದಾರೆ.
ನಿರ್ಮಾಪಕ ಸಂದೀಪ್ ಸಿಂಗ್ ಮತ್ತು ಆನಂದ್ ಪಂಡಿತ್ ಅವರು ಸಾವರ್ಕರ್ ಚಿತ್ರವನ್ನು ನಿರ್ಮಿಸುತ್ತಿದ್ದು, ಇದನ್ನು ಮಹೇಶ್ ಮಂಜ್ರೇಕರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೂಟಿಂಗ್ ಆಗಸ್ಟ್ 2022 ರಿಂದ ಪ್ರಾರಂಭವಾಗಲಿದೆ.
ರಣದೀಪ್ ಹೂಡಾ-ಸಂದೀಪ್ ಸಿಂಗ್ ಈ ಹಿಂದೆ ‘ಸರಬ್ಜಿತ್’ ಸಿನಿಮಾಗೆ ಜೊತೆಯಾಗಿದ್ದರು. ಈ ಜೋಡಿ ಇದೀಗ ಸಾವರ್ಕರ್ ಚಿತ್ರಕ್ಕಾಗಿ ಮತ್ತೊಮ್ಮೆ ಜೊತೆಯಾಗಿದೆ. ಈ ಚಿತ್ರವು ಆಗಸ್ಟ್ 2022 ರಲ್ಲಿ ತೆರೆಗೆ ಬರಲಿದ್ದು, ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
‘ದಾವೂದ್ ಇಬ್ರಾಹಿಂ, ಹರ್ಷದ್ ಮೆಹ್ತಾ ಮತ್ತು ಲಲಿತ್ ಮೋದಿಯವರ ಮೇಲೆ ಚಲನಚಿತ್ರಗಳು ಬರುವಾಗ, ನಾವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರವನ್ನು ಯಾಕೆ ನಿರ್ಮಿಸಬಾರದು ‘ ಎಂದು ನಿರ್ಮಾಪಕ ಸಂದೀಪ್ ಸಿಂಗ್ ದಿ ಹಿಂದೂ ಜೊತೆಗೆ ಪ್ರಶ್ನಿಸಿದ್ದಾರೆ.
ಈ ಹಿಂದೆ, ಪ್ರಧಾನಿ ನರೇಂದ್ರ ಮೋದಿಯ ಚಿತ್ರವನ್ನು ನಿರ್ಮಿಸಲು ಇದೇ ನಿರ್ಮಾಪಕರು ಬಂಡವಾಳ ಹೂಡಿದ್ದರು. 2019 ರ ಚುನಾವಣೆಗೆ ಮುನ್ನ ಈ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಉದ್ದೇಶಿಸಿದ್ದರೂ, ಚುನಾವಣಾ ಆಯೋಗ ಅದಕ್ಕೆ ತಡೆಯೊಡ್ಡಿತ್ತು. ಇದೇ ನಿರ್ಮಾಪಕರು ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಬಗ್ಗೆ ಚಿತ್ರ ಮಾಡಲಿದ್ದಾರೆ ಎಂದು ದ ಹಿಂದೂ ವರದಿ ಮಾಡಿದೆ.
ಹಿಂದುತ್ವದ ನಿರೂಪಣೆಯನ್ನು ಉತ್ತೇಜಿಸುವ ಪ್ರಯತ್ನವಲ್ಲ ಎಂದು ಅವರು ಹೇಳಿದ್ದಾರೆ. “ಇದು ರಾಜಕಾರಣಿಯ ಕೆಲಸ, ಚಲನಚಿತ್ರ ತಯಾರಕರು ಹೇಳಬೇಕಾದ ಕಥೆಯನ್ನು ಹೇಳಲು ಬಯಸುತ್ತಾರೆ” ಎಂದು ಸಿಂಗ್ ಹೇಳಿದ್ದಾರೆ.
ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…
ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …
ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…
ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ.