News Karnataka Kannada
Saturday, April 27 2024
ಮನರಂಜನೆ

ಹಣ ವಂಚನೆ ಆರೋಪ: ಲತಾ ರಜನಿಕಾಂತ್ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

Photo Credit :

 ಹಣ ವಂಚನೆ ಆರೋಪ: ಲತಾ ರಜನಿಕಾಂತ್ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

ಚೆನ್ನೈ: ಚಿತ್ರ ವಿತರಕ ಸಂಸ್ಥೆಗೆ ನೀಡಬೇಕಿದ್ದ 6.20 ಕೋಟಿ ಹಣವನ್ನು ಬಾಕಿ ಉಳಿಸಿಕೊಂಡಿರುವ ಆರೋಪ ಎದುರಿಸುತ್ತಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರ ವಿರುದ್ಧದ ವಿಚಾರಣೆಗೆ ಮಂಗಳವಾರ ಸಮ್ಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಈ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಸದ್ಯ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ದೂರನ್ನು ಆರಂಭಿಕ ಹಂತದಲ್ಲೇ ಹೈಕೋರ್ಟ್ ರದ್ದುಗೊಳಿಸಬಾರದು ಎಂದೂ ತಿಳಿಸಿದೆ.

ಘಟನೆ ಹಿನ್ನೆಲೆ: 2014ರಲ್ಲಿ  ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿನಯಿಸಿದ್ದ ಚಿತ್ರವೊಂದನ್ನು ತಮಿಳುನಾಡಿನಲ್ಲಿ ವಿತರಿಸುವ ಹಕ್ಕು ಪಡೆದಿದ್ದ ಸಂಸ್ಥೆ ಲತಾ ರಜನಿಕಾಂತ್ ಅವರಿಂದ ಬರಬೇಕಿದ್ದ ಬಾಕಿ ಹಣಕ್ಕಾಗಿ ಕೋರ್ಟ್ ಮೆಟ್ಟಿಲೇರಿತ್ತು. ಬಾಕಿ ಸಂದಾಯ ಮಾಡದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಗೆ ಸಮ್ಮಿತಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು