ಬೆಂಗಳೂರು: ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು ಸಂಜೆ ಘೋಷಣೆ ಮಾಡಲಾಗುತ್ತಿದೆ. ಭಾರತದಲ್ಲಿ ತಯಾರಾಗುವ ಅಷ್ಟೂ ಸಿನಿಮಾಗಳೂ ಈ ಸ್ಪರ್ಧೆಗೆ ಸ್ಪರ್ಧಿಸಬಹುದಾಗಿದ್ದು, ಜೊತೆಗೆ ಪ್ರಾದೇಶಿಕ ಸಿನಿಮಾಗಳಿಗೂ ಪ್ರತ್ಯೇಕವಾಗಿ ಪ್ರಶಸ್ತಿಗಳು ಮೀಸಲಿವೆ.
ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ ಪ್ರಶಸ್ತಿಯನ್ನು ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗುತ್ತಿದೆ. 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.
ಸಿನಿಮಾ ರಂಗಕ್ಕೆ ನೀಡುವ ದೇಶದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ರಾಷ್ಟ್ರ ಪತಿಗಳೇ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾರೆ.
ಬಾಲಿವುಡ್ನ ‘ಗಂಗೂಬಾಯಿ ಕಾಠಿಯಾವಾಡಿ’, ತಮಿಳಿನ ‘ಜೈ ಭೀಮ್‘, ‘ಕರ್ಣನ್‘, ‘ಸರ್ಪಟ್ಟ ಪರಂಬರೈ‘, ‘ಮಾನಾಡು‘, ‘ರಾಕೆಟ್ರಿ: ದಿ ನಂಬಿ ಎಫೆಕ್ಟ್‘ ತೆಲುಗಿನಲ್ಲಿ ‘ಆರ್ಆರ್ಆರ್‘, ಅಲ್ಲು ಅರ್ಜುನ್ ನಟನೆಯ ‘ಪುಷ್ಪ‘, ತೆಲುಗಿನ ‘ಜಾತಿ ರತ್ನಾಲು‘, ‘ಉಪ್ಪೆನ‘ ಮಲಯಾಳಂನಲ್ಲಿ ‘ದಿ ಗ್ರೇಟ್ ಇಂಡಿಯನ್ ಕಿಚನ್‘, ‘ಮಿನ್ನಲ್ ಮುರಲಿ‘, ‘ನಾಯಟ್ಟು‘, ‘ಮೇಪ್ಪಾದಿಯಾನ್‘ ಸಿನಿಮಾಗಳು ಪ್ರಶಸ್ತಿ ಗೆಲ್ಲುವ ಸ್ಪರ್ಧೆಯಲ್ಲಿವೆ.