ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅಭಿನಯಿಸಿರುವ ನೈಜ ಘಟನೆ ಆಧಾರಿತ ಸಿನೆಮಾ ‘ಆಡುಜೀವಿತಂ’ ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಪೃಥ್ವಿರಾಜ್ ಸುಕುಮಾರನ್ ಅವರು ಈ ಸಿನಿಮಾದಲ್ಲಿ ಡಿಫರೆಂಟ್ ಗೆಟಪ್ ತಾಳಿದ್ದಾರೆ. ದೇಹದ ತೂಕ ಇಳಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ.
ಈ ಸಿನಿಮಾದಲ್ಲಿ ಪೃಥ್ವಿರಾಜ್ ಸುಕುಮಾರನ್ ಜೊತೆ ಅಮಲಾ ಪೌಲ್, ಜಿಮ್ಮಿ ಜೀನ್ ಲೂಯಿಸ್, ಕೆ.ಆರ್. ಗೋಕುಲ್ ಮುಂತಾದವರು ನಟಿಸಿದ್ದಾರೆ. ಬ್ಲೆಸ್ಸಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅವರು ಈ ಸಿನಿಮಾಗಾಗಿ ಹತ್ತಾರು ವರ್ಷ ಕಷ್ಟಪಟ್ಟಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಎಕ್ಸ್ (ಟ್ವಿಟರ್) ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.
‘ಇದು ತುಂಬ ಒಳ್ಳೆಯ ಸಿನಿಮಾ. ಇದಕ್ಕೆ ಖಂಡಿತವಾಗಿಯೂ ಜನರ ಬೆಂಬಲ ಸಿಗಬೇಕು’ ಎಂದು ನೆಟ್ಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ. ‘ಇದು ಸಿನಿಮ್ಯಾಟಿಕ್ ಮ್ಯಾಜಿಕ್. ಯಾರೂ ಈ ಚಿತ್ರವನ್ನು ಮಿಸ್ ಮಾಡಿಕೊಳ್ಳಬೇಡಿ’ ಎಂದು ಕೆಲವು ಪ್ರೇಕ್ಷಕರು ಹೇಳಿದ್ದಾರೆ.
‘ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್ ಸುಕುಮಾರನ್ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ನಮ್ಮೆಲ್ಲರ ನಿರೀಕ್ಷೆಗೆ ತಮ್ಮಂತೆ ಸಿನಿಮಾ ಮೂಡಿಬಂದಿದೆ’ ಎಂಬ ಮಾತು ಕೂಡ ಪ್ರೇಕ್ಷಕರಿಂದ ಕೇಳಿ ಬಂದಿದೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…