News Karnataka Kannada
Tuesday, April 30 2024
ಮನರಂಜನೆ

ನಟಿ, ನಿರ್ದೇಶಕಿ ಕವಿತಾ ಚೌಧರಿ ಹೃದಯಾಘಾತದಿಂದ ನಿಧನ

ದೂರದರ್ಶನ’ ವಾಹಿನಿಯಲ್ಲಿ ಜನಪ್ರಿಯವಾಗಿದ್ದ ‘ಉಡಾನ್‌’ ಧಾರಾವಾಹಿಯಲ್ಲಿ  ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಎಂಬ ಪಾತ್ರ ಮಾಡಿ ಚಿರಪರಿಚಿತರಾಗಿದ್ದ ನಟಿ ಕವಿತಾ ಚೌಧರಿ ಅವರು ಗುರುವಾರ (ಫೆಬ್ರವರಿ 15) ರಾತ್ರಿ ಹೃದಯಾಘಾತದಿಂದ  ನಿಧನರಾಗಿದ್ದಾರೆ.
Photo Credit : News Kannada

ಪಂಜಾಬ್: ದೂರದರ್ಶನ’ ವಾಹಿನಿಯಲ್ಲಿ ಜನಪ್ರಿಯವಾಗಿದ್ದ ‘ಉಡಾನ್‌’ ಧಾರಾವಾಹಿಯಲ್ಲಿ  ಐಪಿಎಸ್ ಅಧಿಕಾರಿ ಕಲ್ಯಾಣಿ ಸಿಂಗ್ ಎಂಬ ಪಾತ್ರ ಮಾಡಿ ಚಿರಪರಿಚಿತರಾಗಿದ್ದ ನಟಿ ಕವಿತಾ ಚೌಧರಿ ಅವರು ಗುರುವಾರ (ಫೆಬ್ರವರಿ 15) ರಾತ್ರಿ ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಕವಿತಾ ಚೌಧರಿ ಅವರಿಗೆ 67 ವರ್ಷ ವಯಸ್ಸಾಗಿತ್ತು.

ಆರೋಗ್ಯದಲ್ಲಿ ಏರುಪೇರು ಆದ ಬಳಿಕ ಅಮೃತಸರದ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ಕೂಡಲೇ ಚಿಕಿತ್ಸೆ ನೀಡಲಾಯಿತಾದರೂ ಅವರು ಬದುಕಿ ಉಳಿಯಲಿಲ್ಲ.

ಸೀರಿಯಲ್​ ಮಾತ್ರವಲ್ಲದೇ ಜಾಹೀರಾತುಗಳ ಮೂಲಕವೂ ಅವರು ಪ್ರಸಿದ್ಧಿ ಪಡೆದಿದ್ದರು. 80ರ ದಶಕದಲ್ಲಿ ‘ಸರ್ಫ್ ಡಿಟರ್ಜೆಂಟ್’ ಜಾಹೀರಾತುಗಳಲ್ಲಿ ಲಲಿತಾಜಿ ಎಂಬ ಪಾತ್ರ ಮಾಡಿ ಅವರು ಮನೆಮಾತಾಗಿದ್ದರು.

‘ದೂರದರ್ಶನ’ ವಾಹಿನಿಯಲ್ಲಿ ಪ್ರಸಾರವಾದ ‘ಉಡಾನ್​’ ಧಾರಾವಾಹಿಗೆ ಕವಿತಾ ಚೌಧರಿ ಅವರು ನಿರ್ದೇಶನ ಮಾಡಿದ್ದರು. ಮುಖ್ಯ ಪಾತ್ರದಲ್ಲೂ ಅವರೇ ನಟಿಸಿದ್ದರು.

ಶುಕ್ರವಾರ ಬೆಳಿಗ್ಗೆ ಕವಿತಾ ಚೌಧರಿ ಅವರ ಅಂತ್ಯಕ್ರಿಯೆ ನಡೆಸಲಾಯಿತು’ ಎಂದು ಅವರ ಸೋದರಳಿಯ ಅಜಯ್ ಸಾಯಲ್​ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು