ಮಂಗಳೂರು: ಕನ್ನಡದ ಮೇರು ನಟಿಯಾದ ಲೀಲಾವತಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಇವರು ಕಂಕನಾಡಿಯಲ್ಲಿರುವ ಸೈಂಟ್ ಜೋಸೆಫ್ ಎಲಿಮೆಂಟರಿ ಸ್ಕೂಲ್ನಲ್ಲಿ 2ನೇ ತರಗತಿ ವರೆಗೆ ಕಲಿತವರು. ಕಡು ಬಡತನದಲ್ಲಿ ಬೆಳೆದವರು.
ಹಲವಾರು ಕನ್ನಡ ಸಿನೆಮಾದಲ್ಲಿ ನಟಿಸಿದ ಇವರುತುಳು ಭಾಷಾ ಚಲನಚಿತ್ರದ ಆರಂಭಕ್ಕೆ ಲೀಲಾವತಿ ಅವರು ಮೊದಲು ಸಹಾಯಹಸ್ತ ಮಾಡಿದವರು. ತುಳುವಿನ “ದಾರೆದ ಬುಡೆದಿ’ಯಿಂದ ಆರಂಭವಾಗಿ ಹಲವು ತುಳು ಸಿನೆಮಾಗಳ ನಿರ್ಮಾಣಕ್ಕೆ ತನ್ನದೇ ಆದ ರೀತಿಯಲ್ಲಿ ಬೆಂಬಲ-ಸಹಾಯ ಕೊಟ್ಟಿದ್ದಾರೆ.
ತುಳು ಭಾಷೆಯ 2ನೇ ಸಿನೆಮಾ 1971ರಲ್ಲಿ ತೆರೆಕಂಡ “ದಾರೆದ ಬುಡೆದಿ’, 1972ರಲ್ಲಿ ತೆರೆಕಂಡ “ಪಗೆತ ಪುಗೆ’ ಹಾಗೂ ಬಿಸತ್ತಿ ಬಾಬು, 1973ರಲ್ಲಿ ತೆರೆಕಂಡ “ಯಾನ್ ಸನ್ಯಾಸಿ ಆಪೆ’, 1976ರಲ್ಲಿ ಬಂದ “ಸಾವಿರಡೊರ್ತಿ ಸಾವಿತ್ರಿ’, 1981ರಲ್ಲಿ “ಭಾಗ್ಯವಂತೆದಿ’, 1983ರಲ್ಲಿ “ಬದ್ಕೆರೆ ಬುಡ್ಲೆ’ ಹಾಗೂ 1984ರಲ್ಲಿ “ದಾರೆದ ಸೀರೆ’ ಸಿನೆಮಾಗಳಲ್ಲಿ ಅದ್ಬುತವಾಗಿ ಅಭಿನಯಿಸಿ ತನ್ನದೆ ಆದ ಛಾಪು ಅನ್ನು ಮೂಡಿಸಿದ್ದಾರೆ.
ಲೀಲಾವತಿ ಅವರು ಕರಾವಳಿಯಲ್ಲಿ ನಡೆದ ತುಳು ಭಾಷಾ ಕುರಿತಾದ ಕೆಲವು ಕಾರ್ಯಕ್ರಮ, ತುಳು ಸಿನೆಮಾ ಸಂಭ್ರಮದಲ್ಲಿ ಪಾಲ್ಗೊಳುತ್ತಿದ್ದರು. ಜೊತೆಗೆ ಕರಾವಳಿಯ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನವನ್ನು ಕೂಡಾ ಪಡೆದಿದ್ದಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…