ನಟಿ ಸಪ್ತಮಿ ಗೌಡ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಸ್ಪರ್ಧಿಯಾಗಿ ಅಲ್ಲ ಅತಿಥಿಯಾಗಿ ಬಂದಿದ್ದಾರೆ. ಕಾಂತಾರ ಲೀಲಾ ಪಾತ್ರದ ಮೂಲಕ ಹೆಸರು ಗಳಿಸಿದ ಸಪ್ತಮಿ ಗೌಡ ಅವರನ್ನು ಬಿಗ್ ಬಾಸ್ ಸ್ಪರ್ಧಿಗಳು ಖುಷಿಯಿಂದ ಬರಮಾಡಿಕೊಂಡಿದ್ದಾರೆ.
ಅಷ್ಟಕ್ಕೂ ನಟಿ ಬಿಗ್ ಬಾಸ್ ಮನೆಗೆ ಹೋಗಲು ಕಾರಣ ಏನೆಂದರೆ, ‘ಶುಚಿ: ನನ್ನ ಮೈತ್ರಿ ಮುಟ್ಟಿನ ಕಪ್’ ಅಭಿಯಾನದ ರಾಯಭಾರಿ ಆಗಿರುವ ಸಪ್ತಮಿ ಗೌಡ ಅವರು ಮುಟ್ಟಿನ ಕಪ್ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಿಗ್ಬಾಸ್ ಮನೆಗೆ ಆಗಮಿಸಿದ್ದರು. ಋತುಸ್ರಾವದ ಸಮಯದಲ್ಲಿ ಪ್ಯಾಡ್ ಬದಲಿಗೆ ಕಪ್ ಬಳಕೆ ಮಾಡುವುದು ಹೆಚ್ಚು ಶುಚಿದಾಯಕ ಎಂಬುದರ ಜೊತೆಗೆ ಕಪ್ ಬಳಕೆಯಿಂದ ಆಗಬಹುದಾದ ಇನ್ನಷ್ಟು ಲಾಭಗಳ ಬಗ್ಗೆ ಈ ವೇಳೆ ಮಾಹಿತಿ ನೀಡಿದರು.