ಬೆಂಗಳೂರು: ʼಅಪ್ಪು ಉತ್ಸವʼ ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು, ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದರು.

ಮಾರ್ಚ್ 15, 2026 ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ “ಅಪ್ಪು ಉತ್ಸವ” ಹಾಗೂ “21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಾಟ್ಯ ಪ್ರಿಯ ಆಡಿಟೋರಿಯಂ ರಾಮ್ ಮೂರ್ತಿ ನಗರದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಪ್ರಮೀಳಾ ನೈಸರ್ಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

