ದೆಹಲಿ: ಇತ್ತೀಚೆಗೆ ಹಾಡುಗಳನ್ನು ರಿಮೇಕ್ ಮಾಡುವ ಟ್ರೆಂಡ್ ಜೋರಾಗಿ ನಡೆಯುತ್ತಿದ್ದು ಇದರಿಂದಾಗಿ ಕೆಲವು ವಿವಾದ ಸೃಷ್ಟಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಟೀಕೆ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಅದೇ ವಿಷಯಕ್ಕೆ ಈಗ ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಎಆರ್ ರೆಹಮಾನ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.
ಇಂದು ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆದ ಇಶಾನ್ ಖಟ್ಟರ್, ಮೃಣಾಲ್ ಠಾಕೂರ್ ಹಾಗೂ ಪ್ರಿಯಾಂಶು ನಟನೆಯ ‘ಪಿಪ್ಪಾ’ ಸಿನಿಮಾದ ರೆಹಮಾನ್ ಅವರ ‘ಕರಾ ಓಯಿ ಲೋಹ್ ಕಪತ್’ ಹಾಡು ಸುದ್ದಿ ಆಗುತ್ತಿದೆ.
ಈ ಚಿತ್ರವನ್ನು ರಾಜ ಕೃಷ್ಣ ಮೆನನ್ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದ ‘ಕರಾ ಓಯಿ ಲೋಹ್ ಕಪತ್’ ಹಾಡು ಚರ್ಚೆ ಆಗುತ್ತಿದೆ. ಈ ಹಾಡಿಗೆ ತಮ್ಮದೇ ಶೈಲಿಯಲ್ಲಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ ರೆಹಮಾನ್. ಇದನ್ನು ಅನೇಕರು ಟೀಕಿಸಿದ್ದಾರೆ. ಹಾಡಿನ ಉದ್ದೇಶವೇ ಹಾಳಾಗಿದೆ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ.
‘ಕರಾ ಓಯಿ ಲೋಹ್ ಕಪತ್’ ಹಾಡು ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಫೇವರಿಟ್ ಸಾಂಗ್ ಆಗಿತ್ತು. ಪ್ರತಿಭಟನೆಗೆ ಬಳಕೆ ಆಗುತ್ತಿದ್ದ ಪ್ರಭಾವಿ ಹಾಡು ಇದಾಗಿದ್ದು ವರ್ಷ ಕಳೆದಂತೆ ಅನೇಕರ ಸಂಗೀತ ಸಂಯೋಜಕರು ಈ ಹಾಡನ್ನು ತಮ್ಮದೇ ವರ್ಷನ್ನಲ್ಲಿ ಕಂಪೋಸ್ ಮಾಡಿ ಹಾಡು ತನ್ನ ಹಳೆಯ ಸಾರ ಕಳೆದುಕೊಂಡಿದೆ. ಬಂಗಾಳದ ಜನರ ಭಾವನೆಗಳ ಜೊತೆ ರೆಹಮಾನ್ ಆಟವಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.