ಬೆಂಗಳೂರು: ಹಿರಿಯ ನಟಿ ಲೀಲಾವತಿ ( 87 ) ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ನಟಿ ಆರೋಗ್ಯ ವಿಚಾರಿಸಲು ಹಲವು ನಟ, ನಟಿಯರು ಲೀಲಾವತಿ ಅವರ ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿ ತೋಟದ ಮನೆಗೆ ಬರುತ್ತಿದ್ದಾರೆ.
ಇದೀಗ ಖ್ಯಾತ ನಟ ಅರ್ಜುನ್ ಸರ್ಜಾ ಲೀಲಾವತಿ ಅವರ ಮನೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ತಾಯಿಯ ಆರೋಗ್ಯ ವಿಚಾರಿಸುವಾಗ ಲೀಲಾವತಿ ಪುತ್ರ ವಿನೋದ್ ರಾಜ್ ಕಣ್ಣೀರಿಟ್ಟಿದ್ದಾರೆ. ಆನಂತರ ಲೀಲಾವತಿಯವರು ಬೇಗ ಆರೋಗ್ಯ ಸುಧಾರಿಸಲು ಭಗವಂತ ಹನುಮಂತನಲ್ಲಿ ಪ್ರಾರ್ಥಿಸುವುದಾಗಿ ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ. ದೊಡ್ಡ ಹನುಮಂತನ ದೇವಾಲಯ ಕಟ್ಟಿಸಿದ್ದು ಅಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಅರ್ಜುನ್ ಸರ್ಜಾ ಹೇಳಿದ್ದಾರೆ.