ಬಾಲಿವುಡ್

ʼಎಂವೆಜರ್ಸ್ʼ ಭಾರತೀಯ ಪುರಾಣದಿಂದಲೇ ಪ್ರಭಾವಿತವಾಗಿದೆ: ಕಂಗನಾ ರಣಾವತ್‌

ಹಾಲಿವುಡ್‌ ನ ಜನಪ್ರಿಯ ಸೂಪರ್ ಹೀರೋ ಚಿತ್ರ ʼಎಂವೆಜರ್ಸ್ʼ ಭಾರತೀಯ ಪುರಾಣದಿಂದಲೇ ಪ್ರಭಾವಿತವಾಗಿದೆ ಎಂದು ಬಾಲಿವುಡ್‌ ನ ʼರಿವಾಲ್ವರ್‌ ರಾಣಿʼ ಕಂಗನಾ ರಣಾವತ್‌ ಹೇಳಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ನೀವು ಭಾರತೀಯ ಪೌರಾಣಿಕ ಪಾತ್ರವನ್ನು ಆಯ್ಕೆ ಮಾಡುತ್ತೀರಾ ಅಥವಾ ಹಾಲಿವುಡ್‌ ಸೂಪರ್‌ ಹೀರೋ ಪಾತ್ರವನ್ನು ಆಯ್ಕೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ನಾನು ಖಂಡಿತವಾಗಿಯೂ ಭಾರತೀಯ ಪುರಾಣದ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ. ಹಾಲಿವುಡ್‌ ನಮ್ಮ ಭಾರತೀಯ ಸಾಹಿತ್ಯ, ಪುರಾಣಗಳಿಂದ ಅನೇಕ ವಿಷಯಗಳನ್ನು ಎರವಲು ಪಡೆದುಕೊಂಡಿದೆ. ಅವೆಂಜರ್ಸ್‌ ಸಿನೆಮಾವು ಭಾರತೀಯ ಪೌರಾಣಿಕ ಪಾತ್ರಗಳಿಂದ ಪ್ರೇರಿತವಾಗಿದೆ. ಐರನ್ ಮ್ಯಾನ್‌ ಪಾತ್ರವನ್ನು ನೋಡಿದಾಗಲೆಲ್ಲ ನನಗೆ ಮಹಾಭಾರತದ ಕರ್ಣನ ಕವಚ ನೆನಪಾಗುತ್ತದೆ. ಥೋರ್‌ ತನ್ನ ಸುತ್ತಿಗೆಯನ್ನು ಹಿಡಿಯುವುದು ಹನುಮಂತ ತನ್ನ ಗದೆ ಹಿಡಿಯುವುದಕ್ಕೆ ಹೋಲಿಕೆಯಾದಂತೆ ನನಗೆ ಅನ್ನಿಸುತ್ತದೆ” ಎಂದು ಹೇಳಿದ್ದಾರೆ.

ಕಂಗನಾ ಪ್ರಸ್ತುತ ತಮ್ಮ ಮುಂಬರುವ ಚಿತ್ರ ಧಾಕ್ಕಡ್‌ ನ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಅವರ ಅಭಿನಯದ ಭಾರತದ ಮೊದಲ ಮಹಿಳಾ ಕೇಂದ್ರಿತ ಸ್ಪೈ ಥ್ರಿಲ್ಲರ್‌ ಚಿತ್ರ ಇದಾಗಿದ್ದು ಕಂಗನಾರ ಆಕ್ಷನ್‌ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜನೀಶ್ ಘಾಯ್ ನಿರ್ದೇಶಿಸಿದ, ಧಾಕ್ಕಡ್‌ನಲ್ಲಿ ಅರ್ಜುನ್ ರಾಂಪಾಲ್ ಮತ್ತು ದಿವ್ಯಾ ದತ್ತಾ ಕೂಡ ನಟಿಸಿದ್ದಾರೆ. ಚಿತ್ರವು ಮೇ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

19 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

37 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

54 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago