ಇತ್ತೀಚೆಗೆ ತಡೆಕಂಡ ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಭಾರೀ ಜನಮೆಚ್ಚುಗೆ ಪಾತ್ರವಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ನಡುವೆ ಒಂದು ವರ್ಗವು ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದೆ.
ಜೊತೆಗೆ ಚಿತ್ರವು ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿ ವಾಗ್ಯುದ್ಧಕ್ಕೂ ಕಾರಣವಾಗಿದೆ. ಚಿತ್ರಕ್ಕೆ ಜನರಿಂದ ಭಾರಿ ಬೆಂಬಲ, ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಆದರೆ ಕೆಲವರು ಚಿತ್ರದ ಕಥಾವಸ್ತು ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಈ ನಡುವೆ ಈ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಸಿಆಪಿಎಫ್ ಭದ್ರತೆಯೊಂದಿಗೆರ ʼವೈʼ ಕೆಟಗರಿ ಭದ್ರತೆ ಕಲ್ಪಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಚಿತ್ರವು ಈಗಾಗಲೇ ಬಾಕ್ಸಾಫಿಸ್ ನಲ್ಲಿ ಭರ್ಜರಿ ಹಿಟ್ ದಾಖಲಿಸಿದ್ದು, ಒಟ್ಟಾರೆ ೧೦೦ ಕೋಟಿಗಿಂತಲೂ ಹೆಚ್ಚಿನ ಗಳಿಕೆ ಮಾಡಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ತೆರೆಕಂಡ ಎಲ್ಲಾ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ.
ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ.