News Karnataka Kannada
Tuesday, April 30 2024
ಬಾಲಿವುಡ್

ಆರ್ಯನ್‌ ಖಾನ್‌ ಹಾಗೂ ಇತರ ಇಬ್ಬರು ಆರೋಪಿಗಳ ವಿರುದ್ಧ ಸಾಕ್ಷ್ಯಗಳು ಇಲ್ಲ; ಬಾಂಬೆ ಹೈಕೋರ್ಟ್‌

Law
Photo Credit :

ಮುಂಬೈ: ಐಷಾರಾಮಿ ಹಡಗಿನಲ್ಲಿನ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಆರ್ಯನ್‌ ಖಾನ್‌ ಹಾಗೂ ಇತರ ಇಬ್ಬರು, ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸುವಂಥ ಬಲವಾದ ಸಾಕ್ಷ್ಯಗಳು ಮೇಲ್ನೋಟಕ್ಕೆ ಕಂಡುಬರು‌ತ್ತಿಲ್ಲ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಲ್ಲಿ, ಮೂವರು ಆರೋಪಿಗಳಿಗೆ ಅ.28ರಂದು ಜಾಮೀನು ನೀಡಿರುವ ನ್ಯಾಯಮೂರ್ತಿ ಎನ್‌.ಡಬ್ಲ್ಯು.ಸಾಂಬ್ರೆ ಅವರಿರುವ ಏಕಸದಸ್ಯ ಪೀಠ ತನ್ನ ಆದೇಶದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವರವಾದ ಆದೇಶದ ಪ್ರತಿ ಶನಿವಾರ ಲಭ್ಯವಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿರುವ, ಆರ್ಯನ್‌ ಖಾನ್‌ ಸ್ನೇಹಿತರಾದ ಅರ್ಬಾಜ್‌ ಮರ್ಚಂಟ್‌ ಹಾಗೂ ಫ್ಯಾಷನ್‌ ಡಿಸೈನರ್ ಮುನ್ಮೂನ್‌ ಧಮೇಚಾ ಅವರಿಗೂ ಹೈಕೋರ್ಟ್‌ ಜಾಮೀನು ನೀಡಿದೆ.

‘ಆರ್ಯನ್‌ ಖಾನ್‌, ಅರ್ಬಾಜ್‌ ಹಾಗೂ ಧಮೇಚಾ ಅವರ ವಾಟ್ಸ್‌ಆಯಪ್‌ ಚಾಟ್‌ಗಳಲ್ಲಿ ಆಕ್ಷೇಪಾರ್ಹ ಎನ್ನಬಹುದಾದ ಅಂಶಗಳಿಲ್ಲ. ಅವರ ವಿರುದ್ಧ ಹೊರಿಸಲಾದ ಆರೋಪಗಳಿಗೆ ಸಂಬಂಧಿಸಿದಂತೆ ಅಪರಾಧ ಎಸಗಲು ಆರೋಪಿಗಳು ಪಿತೂರಿ ನಡೆಸಿದ್ದರು ಎಂಬುದನ್ನು ಸಹ ಈ ಚಾಟ್‌ಗಳು ತೋರಿಸುತ್ತಿಲ್ಲ’ ಎಂದು ಆದೇಶದಲ್ಲಿ ಹೇಳಲಾಗಿದೆ.

‘ಎನ್‌ಸಿಬಿ ದಾಖಲಿಸಿಕೊಂಡಿರುವ ಆರ್ಯನ್‌ಖಾನ್‌ ತಪ್ಪೊಪ್ಪಿಗೆ ಹೇಳಿಕೆಯನ್ನು ತನಿಖೆ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಬೇಕು. ಎನ್‌ಡಿಪಿಎಸ್‌ ಕಾಯ್ದೆಯಡಿ ಆತ ಅಪರಾಧ ಎಸಗಿದ್ದಾನೆ ಎಂಬುದಾಗಿ ತೀರ್ಮಾನಿಸಲು ಈ ಹೇಳಿಕೆಯನ್ನು ಬಳಸಿಕೊಳ್ಳಬಾರದು’ ಎಂದೂ ಜಾಮೀನು ಆದೇಶದಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು