‘ಕೋರ್ಟ್ ಮ್ಯಾರೇಜ್’ ಆಗುತ್ತಿದ್ದಾರೆ ತಾರಾ ಜೋಡಿ ಕತ್ರಿನಾ ಕೈಫ್  ಮತ್ತು ವಿಕ್ಕಿ ಕೌಶಲ್

ಮುಂಬೈ(ನ.24) : ಕತ್ರಿನಾ ಕೈಫ್  ಮತ್ತು ವಿಕ್ಕಿ ಕೌಶಲ್  ರಾಜಸ್ಥಾನದಲ್ಲಿ ತಮ್ಮ ಮದುವೆಗೆ ತಯಾರಿ ನಡೆಸುತ್ತಿದ್ದಾರೆ. ಇವರಿಬ್ಬರು ಮುಂದಿನ ತಿಂಗಳು ಮದುವೆಯಾಗಲು  ಸಿದ್ಧರಾಗಿದ್ದಾರೆ. ಅವರ ಮದುವೆ ತಿಂಗಳುಗಳ ಕಾಲ ನಡೆಯಲಿದೆ ಎನ್ನುವ ಎಲ್ಲ ಸುದ್ದಿಗಳ ನಡುವೆ ಮತ್ತೊಂದು ಸುದ್ದಿ ಹೊರಗೆ ಬಂದಿದೆ.

ತಾರಾ ಜೋಡಿ ಮುಂಬೈನಲ್ಲಿ ‘ಕೋರ್ಟ್ ಮ್ಯಾರೇಜ್’ ಆಗುತ್ತಿದ್ದಾರೆ. ಅಲ್ಲಿಂದ ರಾಜಸ್ಥಾನಕ್ಕೆ ತೆರಳಿ ಅದ್ದೂರಿ ಮದುವೆ ಸಮಾರಂಭ ನಡೆಯಲಿದೆ ಎನ್ನುವುದು ಸದ್ಯದ ಸುದ್ದಿ.

‘ಕೋರ್ಟ್ ಮ್ಯಾರೇಜ್’ ಮತ್ತು ಮದುವೆ ನೋಂದಣಿಗೂ ವ್ಯತ್ಯಾಸವಿದೆ. ಕೋರ್ಟ್ ಮ್ಯಾರೇಜ್ ಎಂದರೆ ಸಂಪ್ರದಾಯ ಬದ್ಧವಾಗಿಯೇ ಮದುವೆ ನಡೆಯುತ್ತದೆ. ಮದುವೆಯಲ್ಲಿ ಅಧಿಕಾರಿಗಳು ಹಾಜರಿರುತ್ತಾರೆ. ಸಾಕ್ಷಿಗಳಿಂದ ಸಹಿ ಮಾಡಿಸಿಕೊಳ್ಳಲಾಗುತ್ತದೆ.

ಮದುವೆಗೆ ಸಿದ್ಧವಾಗುತ್ತಿದ್ದ ಕತ್ರಿನಾ ಶೂಟಿಂಗ್ ನಿಂದ ವಿರಾಮ ತೆಗೆದುಕೊಂಡಿದ್ದಾರೆ. ಜೋಡಿಯು ರಣಥಂಬೋರ್‌ನ ಬೆಲೆಬಾಳುವ ರೆಸಾರ್ಟ್‌ನಲ್ಲಿ ಅದ್ಧೂರಿ ವಿವಾಹ ಸಮಾರಂಭಕ್ಕೆ ತೆರಳಿಲಿದೆ ಎನ್ನುವುದು ಮಾಹಿತಿ.

ನಟಿ ಮಾಧ್ಯಮಗಳಿಂದ ದೂರವಿದ್ದು ಮದುವೆಯಾಗಲು ನಿರ್ಧರಿಸಿದ್ದಾರೆ. ಇದೇ ಕಾರಣಕ್ಕೆ ಸ್ಥಳದ ಗೌಪ್ಯತೆ ಕಾಪಾಡಿಕೊಂಡು ಬರಲಾಗಿದೆ. ಎರಡು ಕಡೆಯವರು ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದು ಪ್ರತಿ ಸಣ್ಣ ವಿವರವನ್ನು ಅವರ ಖಾಸಗಿಯಾಗಿ ಚರ್ಚೆ ಮಾಡಿಕೊಳ್ಳುತ್ತಿದ್ದಾರೆ.

ಜೋಡಿ ಜುಹುದಲ್ಲಿ 8 ನೇ ಮಹಡಿಯಲ್ಲಿರುವ ಪಾರ್ಟ್ಮೆಂಟ್ ಅನ್ನು ಖರೀದಿಸಿದೆ. ಮುಂದೆ ಸಂಸಾರ ಅಲ್ಲಿಯೇ ಸಾಗಲಿದೆ ಎನ್ನುವ ಮಾಹಿತಿಗಳು ಸಿಕ್ಕಿದ್ದವು. ಬಾಲಿವುಡ್ ಅಂಗಳದಲ್ಲಿ ಸದ್ಯ ಜೋಡಿಯ ಮದುವೆ ವಿಚಾರವೇ ದೊಡ್ಡ ಸುದ್ದಿಯಾಗುತ್ತಿದೆ.

Gayathri SG

Recent Posts

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

13 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

23 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

30 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

43 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

46 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

57 mins ago