ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
2016ರ ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆಯೇ ನಟಿ ಐಶ್ವರ್ಯ ರೈ ಕೆಲವು ದಾಖಲೆ ಪತ್ರಗಳನ್ನು ನೀಡಿದ್ದರು. ಇದೀಗ ಮತ್ತೆ ಇಡಿ ಸಮನ್ಸ್ ನೀಡಿರುವುದು ಐಶ್ವರ್ಯಗೆ ಸಂಕಷ್ಟ ಎದುರಾಗಿದೆ.
ದೆಹಲಿಯಲ್ಲಿರುವ ಇಡಿ ಕಚೇರಿಗೆ ಡಿ.20ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದ್ದು, ಈ ಬಗ್ಗೆ 15 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ತಿಳಿಸಿದೆ.
ಈ ಹಿಂದೆ ಬಿಡುಗಡೆಯಾದ ಪನಾಮಾ ಪೇಪರ್ಸ್ ನ ತನಿಖಾ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಾಗಿದ್ದು, ದೇಶದಲ್ಲಿ ತೆರಿಗೆ ತಪ್ಪಿಸಲು ಹಲವು ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು, ನಟ-ನಟಿಯರು ವಿದೇಶಗಳಲ್ಲಿ ಸಂಪತ್ತು ಹೊಂದಿದ್ದಾರೆ ಎಂದು ತಿಳಿಸಿತ್ತು. ಈಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್ ಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ.