ನವದೆಹಲಿ: ಭಾರತೀಯ ಸಿನಿಮಾ ರಂಗ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡದಾಗಿದೆ ಬೆಳೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮುಖ್ಯ ಕಾರಣ ಪ್ರಧಾನಿ ಮೋದಿ ಅವರು. ಅವರಿಗೆ ನನ್ನ ಧನ್ಯವಾದಗಳು ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.
ಎಎನ್ಐ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಅಕ್ಷಯ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗುರುತಿಸಿಕೊಳ್ಳಲು ಮುಖ್ಯ ಕಾರಣ ಪ್ರಧಾನಿ ಮೋದಿ ಎಂದಿದ್ದು, ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ನಟ ಅಕ್ಷಯ್ ಕುಮಾರ್ ಅವರು ರಾಜ ಪೃಥ್ವಿರಾಜ್ ಚೌಹಾಣ್ ಕುರಿತ ಐತಿಹಾಸಿಕ ಸಿನಿಮಾ ‘ಸಾಮ್ರಾಟ್ ಪೃಥ್ವಿರಾಜ್’ನಲ್ಲಿ ನಟಿಸಿದ್ದು, ಈ ಚಿತ್ರ ಹಿಂದಿ ಮಾತ್ರವಲ್ಲದೇ, ತೆಲುಗು, ತಮಿಳು ಭಾಷೆಗೂ ಡಬ್ ಆಗಿದ್ದು, ಜೂನ್ 3ಕ್ಕೆ ತೆರೆಗೆ ಬರುತ್ತಿದೆ.
ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ, ಫ್ರಾನ್ಸ್ನಲ್ಲಿ ನಡೆದ ಕ್ಯಾನೆಸ್ ಚಲನಚಿತ್ರೋತ್ಸವದ 75 ನೇ ಆವೃತ್ತಿಗೆ ಹಾಜರಾಗ ಸಾಧ್ಯವಾಗಲಿಲ್ಲ ಎಂದು ಈ ವೇಳೆ ತಿಳಿಸಿದ್ದಾರೆ.