ಮುಂಬಯಿ : ಬಾಲಿವುಡ್ ನಟ ಅಕ್ಷಯ್ ಕುಮಾರ್, ಕತ್ರಿನಾ ಕೈಫ್, ಅಜಯ್ ದೇವಗನ್ ಹಾಗೂ ರಣವೀರ್ ಸಿಂಗ್ ಅಭಿನಯಿಸಿರುವ ಸೂರ್ಯವಂಶಿ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಬರೆದಿದೆ. ಬಹು ನಿರೀಕ್ಷಿತ ಈ ಚಿತ್ರ ನ. 5ರಂದು ತೆರೆಗೆ ಅಪ್ಪಳಿಸಿತ್ತು. ಈ ಚಿತ್ರ ಬಿಡುಗಡೆಯಾಗಿ ಹಲವು ದಿನಗಳು ಕಳೆದರೂ ಈ ಚಿತ್ರ ಬಾಕ್ಸ್ ಆಫೀಸ್ ನ್ನು ಕೊಳ್ಳೆ ಹೊಡೆಯುತ್ತಿದೆ.
ಅಭಿಮಾನಿಗಳು ಈ ಚಿತ್ರವನ್ನು ಇದುವರೆಗೂ ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ವೀಕೆಂಡ್ನಲ್ಲಿ ಗಳಿಕೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಹೇಳುತ್ತಿದ್ದಾರೆ. ಇಲ್ಲಿಯವರೆಗೂ ಈ ಚಿತ್ರ ಸುಮಾರು ರೂ. 100 ಕೋಟಿಗೂ ಅಧಿಕ ಹಣ ಗಳಿಸಿದೆ.
ಬಿಡುಗಡೆಯಾದ ಮೊದಲ ದಿನವೇ ಈ ಚಿತ್ರ ರೂ. 26.29 ಕೋಟಿ ಗಳಿಸಿತ್ತು. ಚಿತ್ರ ರಸಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿತ್ರ ಇಂದಿಗೂ ಫುಲ್ ಹೌಸ್ ಆಗಿ ಪ್ರಸಾರವಾಗುತ್ತಿದೆ.
ಈ ಸಿನಿಮಾದಲ್ಲಿ ನಟ ಅಕ್ಷಯ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಪೊಲೀಸ್ ಸರಣಿಯ ಮೂರನೇ ಚಿತ್ರ ಇದಾಗಿದ್ದು, ಮೊದಲೆರಡು ಚಿತ್ರಗಳ ನಾಯಕರಾದ ಅಜಯ್ ದೇವಗನ್ ಹಾಗೂ ರಣವೀರ್ ಸಿಂಗ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೂರ್ಯವಂಶಿ ಚಿತ್ರವು ಸುಮಾರು ರೂ. 165 ಕೋಟಿ ಬಜೆಟ್ನಲ್ಲಿ ನಿರ್ಮಾಣವಾಗಿದೆ. ನಟ ಅಕ್ಷಯ್ ಕುಮಾರ್ ಸದ್ಯ ಅತ್ ರಂಗಿ ರೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್ಸಿಆರ್ಎ ತನಿಖೆಯನ್ನು ಕೋರಿ…
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…