News Karnataka Kannada
Thursday, May 02 2024
ಬಾಲಿವುಡ್

ಭಾರತಕ್ಕೆ ಇರುವುದು ಒಂದೇ ಭಾಷೆ, ಅದು ಮನರಂಜನೆ: ಸೋನು ಸೂದ್

Sonu Sood
Photo Credit :

ಸ್ಯಾಂಡಲ್​ವುಡ್ ನಟ ಸುದೀಪ್ ಹಾಗೂ ಬಾಲಿವುಡ್​ನ ಅಜಯ್ ದೇವಗನ್​ ನಡುವೆ ಉಂಟಾಗಿದ್ದ ‘ಹಿಂದಿ ರಾಷ್ಟ್ರ ಭಾಷೆ’ಯ ಕುರಿತ ಅನೇಕ ನಟ ನಟಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅನೇಕರು ಕಿಚ್ಚ ಸುದೀಪ್ ಪರ ಬ್ಯಾಟ್​ ಬೀಸಿದ್ದಾರೆ.

ಇದೀಗ ಬಹುಭಾಷಾ ನಟ ಸೋನು ಸೂದ್ ಸಹ ಅಜಯ್​ ದೇವಗನ್​​ಗೆ ತಿರುಗೇಟು ನೀಡಿದ್ದು, ಭಾರತಕ್ಕೆ ಇರುವುದು ಒಂದೇ ಭಾಷೆ, ಅದು ಮನರಂಜನೆ ಎಂದರು.

‘ಹಿಂದಿಯನ್ನು ನಾವು ರಾಷ್ಟ್ರ ಭಾಷೆ ಎಂದು ಕರೆಯಲು ಸಾಧ್ಯವಿಲ್ಲ. ನೀವು ಯಾವ ಚಿತ್ರರಂಗಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ನೀವು ಜನರಿಗೆ ಮನರಂಜನೆ ನೀಡಿದರೆ ಅವರು ನಿಮ್ಮನ್ನು ಪ್ರೀತಿಸಲು ಶುರು ಮಾಡುತ್ತಾರೆ. ಜೊತೆಗೆ ನಿಮ್ಮನ್ನು ಒಪ್ಪಿಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಸಿನಿಮಾ ನಿರ್ಮಾಪಕರು ಹಾಗೂ ನಟರು ಜನರ ಸಂವೇದನೆಯನ್ನು ಹೇಗೆ ಗೌರವಿಸಬೇಕು ಎಂಬುದನ್ನು ಕಲಿತುಕೊಳ್ಳಬೇಕು. ಹಿಂದಿನ ಕಾಲದ ಪರಿಸ್ಥಿತಿ ಈಗ ಇಲ್ಲ. ಒಳ್ಳೆಯ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.

ಸುದೀಪ್​- ಅಜಯ್ ದೇವಗನ್​ ನಡುವಿನ ಭಾಷಾ ಚರ್ಚೆ ಅಂತ್ಯಗೊಳ್ಳುತ್ತಿದ್ದಂತೆ ಅನೇಕರು ಸುದೀಪ್​ ಪರವಾಗಿ ಟ್ವೀಟ್ ಮಾಡಿ, ಅಜಯ್ ದೇವಗನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಟಿ ರಮ್ಯಾ, ನಿನಾಸಂ ಸತೀಶ್, ಮನೋಜ್ ಬಾಜಪೇಯ್​ ಹಾಗು ರಾಮಗೋಪಾಲ್ ವರ್ಮಾ ಸಹ ಸೇರಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು