ಮುಂಬೈ : ರೇವ್ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್ ಖಾನ್ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್ ಖಾನ್ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಬುಧವಾರ (ಅ.13) ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್ ಖಾನ್ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ.
ಆರ್ಯನ್ ಖಾನ್ಗೆ ಜಾಮೀನು ಕೊಡಿಸಲು ಶಾರುಖ್ ಖಾನ್ ಹರಸಾಹಸ ಮಾಡುತ್ತಿದ್ದರು. ಪುತ್ರ ಅರೆಸ್ಟ್ ಆದ ದಿನದಿಂದಲೂ ಅವರಿಗೆ ನೆಮ್ಮದಿಯೇ ಇಲ್ಲದಂತಾಗಿದೆ.