News Karnataka Kannada
Friday, May 03 2024
ಬಾಲಿವುಡ್

ಆದಿಪುರುಷ್ ಸಿನೆಮಾ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

adhipurush and venu swamy preduction
Photo Credit : Twitter

ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ಜೂನ್ 16 ರಂದು ವಿಶ್ವದಾದ್ಯಂತ ಸುಮಾರು 12,000 ಸ್ಕ್ರೀನ್​ಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾ ಬಿಡುಗಡೆ ಬಗ್ಗೆ ತೆಲುಗು ರಾಜ್ಯಗಳ ಜನಪ್ರಿಯ ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಆದಿಪುರುಷ್ ಸಿನಿಮಾ ಹಿಂದೂಪರ, ಶ್ರೀರಾಮನ ಕುರಿತಾದ ಸಿನಿಮಾ ಆಗಿದ್ದರೂ ಸಹ ಜನ ತುಂಬಾ ಆಸಕ್ತಿಯನ್ನು ಈ ಸಿನಿಮಾ ಬಗ್ಗೆ ತೋರಿಸುವುದಿಲ್ಲ. ಕಂಟೆಂಟ್ ಇಲ್ಲದ ಸಿನಿಮಾಗಳನ್ನು, ಗುಣಮಟ್ಟ ಇಲ್ಲದ ಸಿನಿಮಾಗಳನ್ನು ಜನ ನೋಡುವುದಿಲ್ಲ. ಅದು ಮಾತ್ರವೇ ಅಲ್ಲದೆ ಪ್ರಭಾಸ್ ಗ್ರಹಗತಿಗಳು ಸಹ ಸರಿಯಿಲ್ಲ. ಇದೇ ಕಾರಣದಿಂದ ಅವರ ಸಿನಿಮಾಗಳು ಸತತವಾಗಿ ಸೋಲುತ್ತಿವೆ. ಆದಿಪುರುಷ್ ಸಿನಿಮಾ ಬಾಹುಬಲಿಯಂತೆ ದೊಡ್ಡ ಯಶಸ್ಸು ಪಡೆಯುವುದಿಲ್ಲ’ ಎಂದಿದ್ದಾರೆ.

ಮಕ್ಕಳು ಸಿನಿಮಾ ನೋಡಿಬಿಟ್ಟರೆ ಸಿನಿಮಾ ದೊಡ್ಡ ಹಿಟ್ ಆಗಿಬಿಡುತ್ತದೆ ಎಂಬುದೆಲ್ಲ ಕೇವಲ ಊಹಾಪೋಹವಷ್ಟೆ. ಸಿನಿಮಾದ ಯಶಸ್ಸು ಸಹ ನಕ್ಷತ್ರಗಳು, ಗ್ರಹಗತಿಯನ್ನು ಆಧರಿಸಿರುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಭಾಸ್ ಗ್ರಹಗತಿ ಸರಿಯಿಲ್ಲ ಎಂದಿದ್ದಾರೆ.

ಜ್ಯೋತಿಷಿ ವೇಣು ಸ್ವಾಮಿ ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ. ಸಮಂತಾ-ನಾಗ ಚೈತನ್ಯ ವಿಚ್ಛೇದನದ ಕುರಿತಾಗಿ ವೇಣುಸ್ವಾಮಿ ಭವಿಷ್ಯ ಹೇಳಿದ್ದರು. ಅಖಿಲ್ ಸಿನಿಮಾಗಳು ಸತತವಾಗಿ ಸೋಲುತ್ತವೆಂದೂ ಭವಿಷ್ಯ ಹೇಳಿದ್ದರು. ರಶ್ಮಿಕಾ ಮಂದಣ್ಣ ಇದೇ ವೇಣುಸ್ವಾಮಿ ಬಳಿ ವಿಶೇಷ ಪೂಜೆ ಮಾಡಿಸಿದ ಬಳಿಕ ಬೇಡಿಕೆಯ ನಟಿಯಾದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು