ಮುಂಬಯಿ: ಬಾಲಿವುಡ್‌ ನಟ, ನಿರ್ದೇಶಕ ಸತೀಶ್‌ ಕೌಶಿಕ್‌ ನಿಧನ

ಮುಂಬಯಿ: ಬಾಲಿವುಡ್‌ನ ಹಿರಿಯ ನಟ, ನಿರ್ದೇಶಕ ಸತೀಶ್‌ ಕೌಶಿಕ್‌ ಇಂದು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ಪ್ರಾಯವಾಗಿತ್ತು.

ಹಿರಿಯ ನಟ ಅನುಪಮ್‌ ಖೇರ್‌ ಟ್ವೀಟ್‌ ಮೂಲಕ ಸತೀಶ್‌ ಕೌಶಿಕ್‌ ನಿಧನರಾಗಿರುವುದನ್ನು ತಿಳಿಸಿದ್ದಾರೆ. ನಟಿ ಕಂಗನಾ ರಣಾವತ್‌ ಅವರು ಸಂತಾಪ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಸತೀಶ್‌ ಕೌಶಿಕ್‌, ನಟ, ನಿರ್ದೇಶಕ, ಚಿತ್ರಕಥೆ ಲೇಖಕ, ನಿರ್ಮಾಪಕ ಹೀಗೆ ಎಲ್ಲವೂ ಆಗಿದ್ದರು. ಹಾಸ್ಯ ಪಾತ್ರಗಳಲ್ಲಿ ಅವರು ಮಿಂಚುತ್ತಿದ್ದರು. ಎಲ್ಲ ಪ್ರಮುಖ ನಟರೊಂದಿಗೆ ಸತೀಶ್‌ ಕೌಶಿಕ್‌ ನಟಿಸಿದ್ದಾರೆ.

ಹರ್ಯಾಣದವರಾದ ಅವರು ಚಿತ್ರರಂಗಕ್ಕೆ ಬರುವ ಮೊದಲು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಕ್ಯಾಲೆಂಡರ್‌, ಮಿಸ್ಟರ್‌ ಇಂಡಿಯಾ, ದೀವಾನ ಮಸ್ತಾನ, ಮುಂತಾದ ಚಿತ್ರಗಳಲ್ಲಿ ಅವರ ಅಭಿನಯ ಸ್ಮರಣೀಯ. ರಾಮ್‌ ಲಖನ್‌ ಮತ್ತು ಸಾಜನ್‌ ಚಲೇ ಸಸುರಾಲ್‌ ಚಿತ್ರಗಳ ಅಭಿನಯಕ್ಕೆ ಅವರಿಗೆ ಎರಡು ಸಲ ಫಿಲ್ಮ್‌ಫೇರ್‌ ಪ್ರಶಸ್ತಿ ಸಿಕ್ಕಿದೆ. ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Sneha Gowda

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

8 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

36 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

41 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

53 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

60 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

1 hour ago