ಶಾರೂಖ್ ಖಾನ್-ದೀಪಿಕಾ ಪಡುಕೋಣೆ ಅಭಿನಯಿಸಿರುವ ಪಠಾಣ್ ಜ.25ರಂದು ತೆರೆಗೆ ಬರಲಿದೆ. ಬೇಷರಮ್ ರಂಗ್ ಹಾಡಿನ ಮೂಲಕ ಕೇಸರಿ ಬಣ್ಣ ಅವಮಾನಿಸಿ, ಕೆಲವರ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಒಂದು ಗುಂಪಿನವರು ಸಿನಿಮಾಗೆ ಬಾಯ್ಕಾಟ್ ಕರೆ ನೀಡಿದ್ದಾರೆ.
ಬೆಷರಮ್’ ಹಾಡಿನಿಂದ ಒಂದು ವರ್ಗದ ಕೆಂಗಣ್ಣಿಗೆ ಗುರಿಯಾಗಿ ಬಾಯ್ಕಾಟ್ ಭೀತಿ ಎದುರಿಸುತ್ತಿರುವ ‘ಪಠಾಣ್’ ಸಿನಿಮಾ ದೇಶಭಕ್ತಿ ಸಾರುವ ಚಿತ್ರ ಎಂದು ಶಾರೂಖ್ ಖಾನ್ ಹೇಳಿದ್ದಾರೆ.
ಆನ್ಲೈನ್ನಲ್ಲಿ ಅಭಿಮಾನಿಗಳೊಂದಿಗೆ #AskSRK ಟ್ಯಾಗ್ನಲ್ಲಿ ಸಂವಾದ ನಡೆಸಿರುವ ಶಾರೂಖ್, ಸರಣಿ ಟ್ವೀಟ್ಗಳ ಮೂಲಕ ಸಿನಿಮಾ ಕುರಿತಾದ ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ತಮ್ಮ ದಿನದ 15 ನಿಮಿಷಗಳ ಕಾಲ ಅಭಿಮಾನಿಗಳಿಗಾಗಿ ಮೀಸಲಿಟ್ಟಿದ್ದ ಶಾರೂಖ್, ಬೇಷರಮ್ ಹಾಡಿನ ವಿವಾದ ಸೇರಿದಂತೆ ಅಭಿಮಾನಿಗಳ ಎಲ್ಲ ಪ್ರಶ್ನೆಗಳನ್ನು ಮುಕ್ತವಾಗಿ ಸ್ವೀಕರಿಸಿದರು.
ಅಭಿಮಾನಿಯೊಬ್ಬರು #AskSRK ಕಾರ್ಯಕ್ರಮ 15 ನಿಮಿಷಗಳ ಕಾಲ ಮಾತ್ರ ಏಕೆ ಎಂಬ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರಿಸಿದ ಶಾರೂಖ್, ಎಲ್ಲರಿಗೂ ಒಂದು 15 ನಿಮಿಷದ ಜನಪ್ರಿಯತೆ ಬೇಕು. ಪಠಾಣ್ ಕೂಡ ದೇಶಭಕ್ತಿಯ ಸಿನಿಮಾ. ಆದರೆ ಆಯಕ್ಷನ್ ರೀತಿಯಲ್ಲಿದೆ ಎಂದು ಉತ್ತರಿಸಿದ್ದಾರೆ.
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…