News Karnataka Kannada
Monday, May 13 2024
ಬಾಲಿವುಡ್

ಸುಶಾಂತ್ ಸಾವಿನ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಕೊಟ್ಟ ಡಿಸಿಎಂ ಹೇಳಿಕೆ

Sushant Singh Rajput
Photo Credit : By Author

2020ರ ಜೂನ್ 14ರಂದು ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿದ್ದಾರೆ ಎಂಬ ಸುದ್ದಿ ಇಡೀ ದೇಶಕ್ಕೆ ಶಾಕ್ ನೀಡಿತ್ತು. ಮುಂಬೈನ ಬಾಂದ್ರಾದಲ್ಲಿನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದುಬಂದರೂ ಸುಶಾಂತ್ ಸಿಂಗ್ ರಜಪೂತ್ ಕುಟುಂಬಸ್ಥರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಮುಂಬೈ ಪೊಲೀಸರು ಹಾಗೂ ಸಿಬಿಐ ತನಿಖೆ ನಡೆಸುತ್ತಲೇ ಇದೆ. ಆದರೆ ಈವರೆಗೆ ಸುಶಾಂತ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆದರೆ ಈಗ ರಿಪಬ್ಲಿಕ್ ಚಾನೆಲ್ ಜತೆ ನಡೆದ ಸಂದರ್ಶನದಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಮಾತನಾಡಿದ ದೇವೇಂದ್ರ ಫಡ್ನಾವಿಸ್ ‘ಕೆಲವು ವ್ಯಕ್ತಿಗಳು ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಪ್ರತಿಪಾದಿಸಿದರು. ಅಂತಹವರನ್ನು ನಾವು ಅವರನ್ನು ಸಂಪರ್ಕಿಸಿದೆವು ಮತ್ತು ಸಾಕ್ಷ್ಯವನ್ನು ಪೊಲೀಸರಿಗೆ ಸಲ್ಲಿಸುವಂತೆ ವಿನಂತಿಸಿದೆವು’ ಎಂದು ಹೇಳಿಕೊಂಡರು.

ಇನ್ನೂ ಮುಂದುವರೆದು ಮಾತಾನಾಡಿದ ದೇವೇಂದ್ರ ಫಡ್ನಾವಿಸ್ ‘ಸದ್ಯ ನಾವು ಪ್ರಸ್ತುತಪಡಿಸಿದ ಪುರಾವೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೇವೆ. ತನಿಖೆ ಇನ್ನೂ ಪ್ರಗತಿಯಲ್ಲಿದೆ ಮತ್ತು ಈ ಹಂತದಲ್ಲಿ ಪ್ರಕರಣದ ಅಂತಿಮ ಫಲಿತಾಂಶದ ಕುರಿತು ಯಾವುದೇ ಕಾಮೆಂಟ್‌ಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ. ಈ ಮೂಲಕ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಸತ್ಯಾಂಶ ಹೊರಬೀಳಲಿದೆ ಎಂಬ ಸುಳಿವನ್ನು ದೇವೇಂದ್ರ ಫಡ್ನಾವಿಸ್ ನೀಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು