ಸುಶಾಂತ್ ಸಿಂಗ್ ರಜಪೂತ್, ಅಸಾಧಾರಣ ಪ್ರತಿಭಾನ್ವಿತ ನಟ, ಪರದೆಯ ಮೇಲೆ ತನ್ನ ಅದ್ಭುತ ನಟನೆಯಿಂದ ಸಿನಿರಸಿಕರ ಹೃದಯದಲ್ಲಿ ಮರೆಯಲಾಗದ ಪ್ರಭಾವ ಬೀರಿದ ಸ್ಪುರದ್ರೂಪಿ ಕಲಾವಿದ. ಆದರೆ ಇಂತಹ ನಟನ ಅಗಾಧ ಪ್ರತಿಭೆ ಅವರ ದುರಂತ ಮರಣದ ನಂತರ ಜನರಿಗೆ ಅರ್ಥವಾಗಿದ್ದು.
ಸುಶಾಂತ್ ಅಗಲಿಕೆಯ ನಂತರ ಜಗತ್ತು ಅವರ ಅಪ್ರತಿಮ ಸಾಮರ್ಥ್ಯವನ್ನು ಅರಿತುಕೊಂಡಿತು ಎನ್ನುವುದೇ ಬೇಸರದ ಸಂಗತಿ. ಇಂದು ಅವರ ಮೂರನೇ ವರ್ಷದ ಪುಣ್ಯತಿಥಿ. ಸುಶಾಂತ್ ಸಿಂಗ್ ಅವರು ಮುಂಬೈನ ಫ್ಲ್ಯಾಟ್ ಒಂದರಲ್ಲಿ ಉಳಿದುಕೊಳ್ಳುತ್ತಿದ್ದರು. ಅದೇ ಫ್ಲ್ಯಾಟ್ನಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆದರು. ಇದು ಆತ್ಮಹತ್ಯೆ ಎಂದು ಆರಂಭದಲ್ಲಿ ಊಹಿಸಲಾಗಿತ್ತು.
ಆದರೆ ಇನ್ನೂ ಕೆಲವರು ‘ಸುಶಾಂತ್ ಅವರನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆ ಎಂದು ಬಿಂಬಿಸುವ ಕೆಲಸ ಆಗಿದೆ’ ಎಂದು ಕೆಲವರು ಆರೋಪಿಸಿದರು. ಈ ಆರೋಪಗಳ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಹೆಸರು ಮುನ್ನೆಲೆಗೆ ಬಂತು. ಬಳಿಕ ಅವರನ್ನು ಬಂಧಿಸಿ ವಿಚಾರಣೆ ನಡೆಸಿ, ಈ ಪ್ರಕರಣವನ್ನು ಎನ್ಸಿಬಿ ಕೂಡ ವಿಚಾರಣೆ ನಡೆಸಿತು.
ಈ ಮಧ್ಯೆ ನ್ಯಾಯ ಕೊಡಿಸಿ ಎನ್ನುವ ಒತ್ತಾಯ ಅಭಿಮಾನಿಗಳಿಂದ ಹೆಚ್ಚಿತು. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಯಿತು. ಸಿಬಿಐ ಪ್ರಕರಣವನ್ನು ತನಿಖೆ ಮಾಡುತ್ತಿದೆ. ಆದರೆ, ಈ ಪ್ರಕರಣದಲ್ಲಿ ಸತ್ಯ ಮಾತ್ರ ಈವರೆಗೆ ಹೊರಬಿದ್ದಿಲ್ಲ.
ಸುಶಾಂತ್ ಸಿಂಗ್ ರಜಪೂತ್ ಅವರು ಚೇತನ್ ಭಗತ್ ಅವರ ಕಾದಂಬರಿ “ದಿ 3 ಮಿಸ್ಟೇಕ್ಸ್ ಆಫ್ ಮೈ ಲೈಫ್” ಅನ್ನು ಆಧರಿಸಿದ “ಕೈ ಪೋ ಚೆ!” ಚಿತ್ರದ ಮೂಲಕ ನಟನೆಯನ್ನು ಪ್ರಾರಂಭಿಸಿದರು. ಬಳಿಕ ಪಿಕೆ, ಎಂ ಎಸ್ ಧೋನಿ, ಚಿಚೋರೆ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಸುಶಾಂತ್ ಅಪಾರ ಸಂಖ್ಯೆ ಅಭಿಮಾನಿಗಳನ್ನು ಹೊಂದಿದ್ದಾರೆ.
ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…
ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…
ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…