News Karnataka Kannada
Sunday, April 28 2024
ಕೋಸ್ಟಲ್ ವುಡ್

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತುಳು ಸಿನಿಮಾ ನವಂಬರ್ ನಲ್ಲಿ ತೆರೆಗೆ

'Circus', a Tulu film directed by Rupesh Shetty, to hit screens in November
Photo Credit : News Kannada

ತುಳು ಸಿನಿಮಾರಂಗದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಸರ್ಕಸ್ ತುಳು ಸಿನಿಮಾ ನವಂಬರ್ ನಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ.ಜೊತೆಗೆ ಸಿನಿಮಾವನ್ನು ಏಕಕಾಲದಲ್ಲಿ ವಿದೇಶದಲ್ಲೂ‌ ಬಿಡುಗಡೆಗೊಳಿಸಲು ಯೋಜನೆ ರೂಪಿಸಿದ್ದಾರೆ.

ತುಳು ಸಿನಿಮಾರಂಗದಲ್ಲಿ ಗಿರಿಗಿಟ್ ಸಿನಿಮಾ ಭರ್ಜರಿ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ತುಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟರಾಗಿದ್ದಾರೆ. ಈ ಮಧ್ಯೆ ಕನ್ನಡದಲ್ಲಿ ‘ಗೋವಿಂದಾ ಗೋವಿಂದಾ’ ಸಹಿತ ಎರಡ್ಮೂರು ಸಿನಿಮಾದಲ್ಲೂ ನಟಿಸಿದ ಅನುಭವ ಅವರಿಗಿದೆ. ಕಳೆದ ವರ್ಷ ಲಾಕ್ ಡೌನ್ ಸಂದರ್ಭ ಇದೇ ತಂಡದಿಂದ ತೆರೆಕಂಡ ಗಮ್ಜಾಲ್ ಕೂಡಾ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಇದೀಗ ರೂಪೇಶ್ ಶೆಟ್ಟಿ ತಂಡ ಸರ್ಕಸ್ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆಗಾಗಿ ನವಂಬರ್ ತಿಂಗಳಿನಲ್ಲಿ ದಿನ ನಿಗದಿಗೊಳಿಸಿದ್ದಾರೆ.

ಪ್ರತೀ ಚಿತ್ರದಲ್ಲೂ ಹೊಸತನ ಬಯಸುವ ರೂಪೇಶ್ ಶೆಟ್ಟಿ ಈ ಬಾರಿ ಕೂಡಾ ಒಂದು ಉತ್ತಮ ಕಥೆಯನ್ನು ಆಯ್ಕೆ ಮಾಡಿದ್ದಾರೆ. ಗಿರಿಗಿಟ್, ಗಮ್ಜಾಲ್ ಗೆ ಸಂಭಾಷಣೆ ಬರೆದ ಪ್ರಸಣ್ಣ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ ಸಂಭಾಷಣೆ ಬರೆದಿದ್ದಾರೆ.

ರೂಪೇಶ್ ಶೆಟ್ಟಿ ಅವರು ತನ್ನದೇ ಆದ ಒಂದು ತಂಡವನ್ನು ಕಟ್ಟಿ ಕೊಂಡಿದ್ದಾರೆ. ಹೀಗಾಗಿ ಅವರ ಕೆಲಸ ಕಾರ್ಯಗಳು ಅವರು ಎಣಿಸಿದಂತೆ ಬಹು ಸುಲಭ ಆಗುತ್ತಿದೆ. ರೂಪೇಶ್ ಈ ಬಾರಿ ತುಳುವಿಗೊಬ್ಬ ಹೊಸ ಖಳನಟನನ್ನು ತುಳುವಿಗೆ ಪರಿಚಯಿಸುತ್ತಿದ್ದಾರೆ.

ಯಶ್ ಶೆಟ್ಟಿ ಎಂಬವರು ಸಲಗ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಬಂದವರು. ಯಶ್ ಈಗ ಸರ್ಕಸ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅದೇ ರೀತಿ ರಚನಾ ರೈ ಎಂಬ ನಟಿಯನ್ನು ರೂಪೇಶ್ ತುಳುವಿಗೆ ಪರಿಚಯಿಸುತ್ತಿದ್ದಾರೆ. ‘ಗಿರಿಗಿಟ್‌’ ತುಳು ಚಿತ್ರಗಳ ಪೈಕಿ ಅತ್ಯಂತ ಯಶಸ್ವಿಯಾದ ಹಾಸ್ಯಮಯ ಚಿತ್ರ. ಹಲವು ದೇಶಗಳಲ್ಲಿ ಗಿರಿಗಿಟ್ ಬಿಡುಗಡೆ ಗೊಂಡು ಭರ್ಜರಿ ಪ್ರದರ್ಶನ ಕಂಡಿದೆ.

ಈಗ ಅದೇ ತಂಡ ‘ಸರ್ಕಸ್‌’ ಸಿನಿಮಾ ಮಾಡಿದೆ. ‘ಸರ್ಕಸ್‌’ ಶೀರ್ಷಿಕೆ ಕನ್ನಡದಲ್ಲಿ ಈಗಾಗಲೇ ಯಶಸ್ವಿಯಾದ ಚಿತ್ರದ ಹೆಸರು. ಹಿಂದಿಯಲ್ಲೂ ಮುಂದಿನ ವರ್ಷ ಇದೇ ಹೆಸರಿನ ಚಿತ್ರವೊಂದು ತೆರೆ ಕಾಣಲಿದೆ. ತುಳು ಚಿತ್ರಗಳ ಸಾಮಾನ್ಯ ಪ್ರಕಾರವೇ ಹಾಸ್ಯ. ‘ಸರ್ಕಸ್‌’ನಲ್ಲೂ ಅದೇ ಪ್ರಧಾನ ವಸ್ತು. ರೂಪೇಶ್‌ ಶೆಟ್ಟಿ ನಿರ್ದೇಶಿಸಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಕೇಶ್‌ ಕದ್ರಿ ಕ್ರಿಯೆಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ.

ಉಳಿದಂತೆ ತುಳು ಚಿತ್ರರಂಗದ ಘಟಾನುಘಟಿ ಕಲಾವಿದರಾದ ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ್, ನಿತೇಶ್ ಶೆಟ್ಟಿ ಎಕ್ಕಾರ್, ರೂಪಾ ವರ್ಕಾಡಿ, ಪಂಚಮಿ ಭೋಜರಾಜ್, ತಾರಾಗಣದಲ್ಲಿದ್ದಾರೆ.

ಸಿನಿಮಾಕ್ಕೆ 25 ದಿನಗಳ ಚಿತ್ರೀಕರಣ ನಡೆದಿದೆ. ಆರ್ ಎಸ್ ಸಿನಿಮಾ ಮತ್ತು ಶೂಲಿನ್ ಫಿಲ್ಮ್ ಲಾಂಛನದಡಿಯಲ್ಲಿ ಸರ್ಕಸ್ ಸಿನಿಮಾ ತಯಾರಾಗಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.

ಸಂಭಾಷಣೆ ಪ್ರಸಣ್ಣ ಶೆಟ್ಟಿ ಬೈಲೂರು, ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ, ರಾಹುಲ್ ವಶಿಷ್ಠ ಸಂಕಲನ ಈ ಚಿತ್ರಕ್ಕಿದೆ. ಗಿರಿಗಿಟ್ ಬಳಿಕ ರೂಪೇಶ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು