ಮಂಗಳೂರು: ಪೋಸ್ಟರ್ ತುಳು ಚಿತ್ರದ ಟೈಟಲ್ ಬಿಡುಗಡೆ

ಮಂಗಳೂರು: ಪೋಸ್ಟರ್ ತುಳು ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಪ್ರಕಾಶ್ ಪಾಂಡೇಶ್ವರ ಟೈಟಲ್ ಲಾಂಚ್ ಮಾಡಿದರು.

ಕಾರ್ಯಕ್ರಮದಲ್ಲಿ ತುಳು ಚಿತ್ರ ರಂಗದ ನಟರಾದ ಅರ್ಜುನ್ ಕಾಪಿಕಾಡ್, ವಿನೀತ್ ಕುಮಾರ್ , ಅನೂಪ್ ಸಾಗರ್, ಆಸ್ತಿಕ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ಮಂಜು ರೈ, ಪ್ರಕಾಶ್ ಶೆಟ್ಟಿ ಧರ್ಮನಗರ ಉಪಸ್ಥಿತರಿದ್ದರು.

ಕಾಂತಾರ ಚಿತ್ರದ ಮೂಲಕ ಸಿನಿ ರಸಿಕರ ಮನ ಗೆದ್ದ ಕರಾವಳಿ ಮೂಲದ ನಟರಾದ ಪ್ರಕಾಶ್ ತೂಮಿನಾಡು, ಶನಿಲ್ ಗುರು ಪೋಸ್ಟರ್ ತುಳು ಚಿತ್ರಕ್ಕೆ ಶುಭ ಹಾರೈಸಿದರು.

ಇನ್ನು ಪೋಸ್ಟರ್ ಚಿತ್ರದ ವಿಶೇಷತೆ ಅಂದ್ರೆ ಉದ್ಯಮಿ ರಾಕೇಶ್ ಶೆಟ್ಟಿ ಅವರ ಸುಪುತ್ರ ರಾಜನ್ ರಾಕೇಶ್ ಶೆಟ್ಟಿ ಚಿತ್ರದ ನಿರ್ಮಾಪಕರಾಗಿದ್ದು ಯಂಗೆಸ್ಟ್ ಪ್ರೊಡ್ಯೂಸರ್ ಆಫ್ ತುಳುನಾಡು ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ.

ಇನ್ನು ಪೋಸ್ಟರ್ ಚಿತ್ರಕ್ಕೆ ಅರ್ಜುನ್ ಬೋಳಾರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಅಶ್ವಿನಿ ಪ್ರಕಾಶ್ ಶೆಟ್ಟಿ ನಿರ್ದೇಶನ, ಡಿಬಿಸಿ ಶೇಖರ್ ಸಾಹಿತ್ಯ, ಉದಯ್ ಬಳ್ಳಾಲ್ ಛಾಯಾಗ್ರಹಣ ಇರಲಿದೆ. ಉದ್ಯಮಿ ರಾಕೇಶ್ ಶೆಟ್ಟಿ ಅವರು ತುಳುನಾಡು ಮೂಲದ ಉದ್ಯಮಿಯಾಗಿದ್ದು ಈ ಹಿಂದೆ ಬಾಲಿವುಡ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು, ಇದೀಗ ತುಳು ಭಾಷೆಯ ಮೇಲಿನ ಪ್ರೀತಿಯಿಂದ ಹೊಚ್ಚ ಹೊಸ ತುಳು ಸಿನೆಮಾ ನಿರ್ಮಾಣ ಮಾಡುತ್ತಿದ್ದಾರೆ.

ತುಳುಚಿತ್ರರಂಗಕ್ಕೆ ಯಂಗೆಷ್ಟ್ ನಿರ್ಮಾಪಕನ ಎಂಟ್ರಿ…
ಶ್ರೀ ವಿಠಲ ಶೆಟ್ಟಿ ಫೌಂಡೇಷನ್ ಅರ್ಪಿಸುವ ಕುಷಿ ಪಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ತುಳುಚಿತ್ರರಂಗದ ಪ್ರಥಮ ಮಹಿಳಾ ನಿರ್ದೇಶಕಿ ಅಶ್ವಿನಿ ಪಿ.ಎಸ್ ನಿರ್ದೇಶನದ ತುಳುಚಿತ್ರರಂಗದ ಯಂಗೆಷ್ಟ್ ನಿರ್ಮಾಪಕ ರಾಜನ್ ರಾಕೇಶ್ ಶೆಟ್ಟಿ ನಿರ್ಮಾಣದ ವಿಭಿನ್ನ ಕಥಾಹಂದರವಿರುವ ತುಳುಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago