News Karnataka Kannada
Monday, April 29 2024
ಮನರಂಜನೆ

ಧಾರ್ಮಿಕ ಭಾವನೆಗಳಿಗೆ  ಧಕ್ಕೆ ತಂದ ಆರೋಪ: ರಣಬೀರ್‌ ಕಪೂರ್‌ ವಿರುದ್ಧ ದೂರು ದಾಖಲು

Complaint filed against Ranbir Kapoor for allegedly hurting religious sentiments
Photo Credit : News Kannada

ಮುಂಬೈ:  ನಟ ರಣಬೀರ್‌ ಕಪೂರ್‌ ನಟಿಸಿರುವ ಅನಿಮಲ್‌ ಚಿತ್ರವು ಭರ್ಜರಿ ಹಿಟ್‌ ಆಗಿದ್ದು, ಅದೇ ಸಂಭ್ರಮದಲ್ಲಿದ್ದ ರಣಬೀರ್‌ ಕಪೂರ್‌ಗೆ  ಶಾಕ್ ಸಿಕ್ಕಿದೆ.

ಧಾರ್ಮಿಕ ಭಾವನೆಗಳಿಗೆ  ಧಕ್ಕೆ ತಂದ ಆರೋಪದ ಹಿನ್ನೆಲೆಯಲ್ಲಿ ನಟ ರಣಬೀರ್‌ ಕಪೂರ್‌ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮುಂಬೈನ ಘಟ್ಕೋಪರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ರಣಬೀರ್‌ ಕಪೂರ್‌ ಹಾಗೂ ಅವರ ಕುಟುಂಬಸ್ಥರು ಕೇಕ್‌ ಮೇಲೆ ಮದ್ಯ ಸುರಿದು, ಬೆಂಕಿ ಹಚ್ಚಿದ ಬಳಿಕ, ಜೈ ಮಾತಾ ದಿ ಎಂದು ಘೋಷಣೆ ಕೂಗಿರುವುದು, ಸಂಭ್ರಮಾಚರಣೆ ಹೆಸರಿನಲ್ಲಿ ಹಿಂದೂಗಳ ನಂಬಿಕೆಗೆ ಧಕ್ಕೆ ತಂದಿದ್ದಾರೆ ಎಂದು ಸಂಜಯ್‌ ತಿವಾರಿ ಎಂಬುವರು ದೂರು ದಾಖಲಿಸಿದ್ದಾರೆ.

ಸಂಭ್ರಮಾಚರಣೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು,ಇದೇ ಈಗ ವಿವಾದಕ್ಕೆ ಕಾರಣವಾಗಿದೆ. ಆದಾಗ್ಯೂ, ಕೇಸ್‌ ದಾಖಲಾಗಿರುವ ಕುರಿತು ನಟ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

 

 

View this post on Instagram

 

A post shared by Filmfare (@filmfare)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು