ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು: ಕಂಗನಾ ರಣಾವತ್​

ಮುಂಬೈ: ಕಾಂಗ್ರೆಸ್​ ಪಕ್ಷದ ವಿರುದ್ಧ ಗುಡುಗಲು ನಟಿ ಕಂಗನಾ ರಣಾವತ್​ ಅವರು ಆರಂಭಿಸಿದ್ದಾರೆ. ಇಷ್ಟು ದಿನ ಬಾಲಿವುಡ್​ ಮಂದಿಯನ್ನು ಟೀಕಿಸುತ್ತಿದ್ದ ಅವರು ಈಗ ಕಾಂಗ್ರೆಸ್​  ಪಕ್ಷದವರನ್ನು ಟೀಕಿಸುತ್ತಿದ್ದಾರೆ.

ಕಾರಣ ಮಾತ್ರ ಒಂದೇ. ಅದು ನೆಪೋಟಿಸಂ! ಹೌದು, ಕಂಗನಾ ರಣಾವತ್​ ಅವರಿಗೆ ನೆಪೋಟಿಸಂ ಎಂದರೆ ಆಗುವುದಿಲ್ಲ. ಅವಕಾಶಗಳು ಕೇವಲ ವಂಶ ಪಾರಂಪರ್ಯವಾಗಿ ಸಿಗುವುದನ್ನು ಅವರು ವಿರೋಧಿಸುತ್ತಾ ಬಂದಿದ್ದಾರೆ.

ಈಗ ರಾಹುಲ್​ ಗಾಂಧಿಯನ್ನು ನೆಪೋಟಿಸಂ ಮಗು ಎಂದು ಕಂಗನಾ ಕರೆದಿದ್ದಾರೆ. ಟೈಮ್ಸ್​ ನೌ ನಡೆಸಿದ ಸಂದರ್ಶನದಲ್ಲಿ ಕಂಗನಾ ರಣಾವತ್​ ಅವರು ಈ ವಿಚಾರ ಮಾತನಾಡಿದ್ದಾರೆ.

ಸೋನಿಯಾ ಗಾಂಧಿ ಅವರ ಮಕ್ಕಳಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ಒಂದೇ ಪದದಲ್ಲಿ ವಿವರಿಸಿ ಎಂದು ಕೇಳಿದ್ದಕ್ಕೆ, ‘ನೆಪೋಟಿಸಂ ಮಕ್ಕಳು’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ‘ಅವರು ಮಂಗಳ ಗ್ರಹದಿಂದ ಬಂದಿದ್ದಾರೆ ಎಂಬಷ್ಟು ವಿಚಿತ್ರವಾಗಿದ್ದಾರೆ’ ಎಂದು ಅವರು ಟೀಕೆ ಮಾಡಿದ್ದಾರೆ.

‘ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು. ಆ ಪಕ್ಷದಲ್ಲಿ ಇರುವ ನೆಪೋಟಿಸಂ ನನಗೆ ಬಹಳ ತೊಂದರೆ ಎನಿಸುತ್ತಿತ್ತು. ಯಾಕೆಂದರೆ ಚಿತ್ರರಂಗದಲ್ಲಿ ನೆಪೋಟಿಸಂ ಕಾರಣದಿಂದಲೇ ನಾನು ಟಾರ್ಗೆಟ್​ ಆಗಿದ್ದೆ. ಅದನ್ನು ನಾನು ನೇರವಾಗಿಯೇ ವಿರೋಧಿಸಿದೆ. ಅದು ನನ್ನನ್ನು ಶೋಷಣೆ ಮಾಡುತ್ತಿತ್ತು. ನೆಪೋಟಿಸಂ, ಗುಂಪುಗಾರಿಕೆ, ವಂಶ ಪಾರಂಪರ್ಯ ರಾಜಕೀಯ. ಈ ಕಾರಣದಿಂದಲೇ ನಾನು ಕಾಂಗ್ರೆಸ್​ ಪಕ್ಷವನ್ನು ಇಷ್ಟಪಡುವುದಿಲ್ಲ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

Ashika S

Recent Posts

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

21 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

1 hour ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

3 hours ago