Bengaluru 27°C
Ad

ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ: ಹಣೆಬರಹ ಎಂದ ಶಿವರಾಜ್‌ಕುಮಾರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Ad
300x250 2

ನಟ ಶಿವರಾಜ್‌ಕುಮಾರ್ ಮಾತನಾಡಿ, ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ.

ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ.

 

Ad
Ad
Nk Channel Final 21 09 2023
Ad