Categories: ಮನರಂಜನೆ

ತೆರೆಗೆ ಬರಲು ರೆಡಿಯಾದ “ದಿಲ್ ಖುಷ್”

ಇದು ಬರಿ ಯುವಜನತೆಯ “ದಿಲ್ ಖುಷ್” ಅಲ್ಲ. ಎಲ್ಲರಿಗೂ ಹಿಡಿಸುವ “ದಿಲ್ ಖುಷ್”. ಸಂಪೂರ್ಣ ಕುಟುಂಬ ಸಮೇತ ನೋಡಬಹುದಾದ ಚಿತ್ರ ಎಂದು ಚಿತ್ರ ತಂಡ ಹೇಳುತ್ತಿದೆ. ಸದ್ಯ ವಿಭಿನ್ನ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ ಡಬ್ಬಿಂಗ್ ಕೂಡ ಪೂರ್ಣವಾಗಿದ್ದು, ರೀರೆಕಾರ್ಡಿಂಗ್ ನಡೆಯುತ್ತಿದೆ.

ನಿರ್ದೇಶಕ ಪ್ರಮೋದ್ ಜಯ ಹೇಳುವಂತೆ ಈ ಚಿತ್ರದಲ್ಲಿ ನಾಯಕ, ನಾಯಕಿ ಪಾತ್ರ ಅಷ್ಟೆ ಅಲ್ಲದೆ ಎಲ್ಲ ಪಾತ್ರಕ್ಕೂ ಪ್ರಾಮುಖ್ಯತೆ ಇದೆ, ನಮ್ಮ ಸುತ್ತ ಮುತ್ತ ನಡೆಯುವ ಕಥೆ ಎಂದೆನಿಸುತ್ತದೆ. ಕಾಮಿಡಿ ಹಾಗು ಎಮೋಷನಲ್ ಸನ್ನಿವೇಶಗಳಲ್ಲಿ ರಂಗಾಯಣ ರಘು, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು ಅವರ ಪಾತ್ರಗಳು ಕಾಡುತ್ತವೆ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರದ ಪ್ರಥಮ ಪ್ರತಿ ಸದ್ಯದಲ್ಲೇ ಸಿದ್ದವಾಗಲಿದೆ‌. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಫೆಬ್ರವರಿ ನಂತರ ಒಂದಾದ ಮೇಲೆ ಒಂದು ಹಾಡು ಬಿಡುಗಡೆಯಾಗಲಿದೆ. ಆನಂತರ ಟ್ರೇಲರ್ ಕೂಡ ಬರಲಿದೆ‌. ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ರಂಜಿತ್ ಮೊದಲ ಬಾರಿಗೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪಾದಾರ್ಪಣೆ ಮಾಡುತ್ತಿದ್ದು, ನಾಯಕಿಯಾಗಿ ಸ್ಪಂದನ ಸೋಮಣ್ಣ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಚಿತ್ರ ಬಹುಬೇಗ ತೆರೆಗೆ ಬರಲಿದೆ.

Gayathri SG

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

21 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

39 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

51 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

1 hour ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago