ಬೆಂಗಳೂರು: ಕನ್ನಡದ ‘ದಿಯಾ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ್ದಾರೆ.
ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ‘ಒಪ್ಪೀಸ್’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ.
ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು ‘ದಿಯಾ’ ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಶೆಟ್ಟಿ. ಸದ್ಯ ಅವರೀಗ ‘ಬ್ಲಿಂಕ್’ ಎಂಬ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ ‘ಬೆಂಗಳೂರು ಕಥೆ’ ಬರೆದು ನಿರ್ದೇಶನ ಮಾಡಿದ್ದಾರೆ. ಮಾರ್ಚ್ 8ಕ್ಕೆ ‘ಬ್ಲಿಂಕ್’ ರಿಲೀಸ್ ಆಗ್ತಿದೆ.
ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿಗಳ ಗ್ಯಾಂಗ್ ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…
ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…
ಸ್ಯಾಂಡಲ್ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…