ಕೊಚ್ಚಿ: ಹೊಸ ಚಲನಚಿತ್ರಗಳು ಬಿಡುಗಡೆಯಾದಾಗ ಸಾಮಾಜಿಕ ಮಾಧ್ಯಮದಲ್ಲಿ ನಕಾರಾತ್ಮಕ ವಿಶ್ಲೇಷಣೆ ಮಾಡಿರುವ ಬಗ್ಗೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಬುಧವಾರ ಮೊದಲ ಪ್ರಕರಣ ದಾಖಲಿಸಿದ್ದಾರೆ.
ಈ ಕುರಿತು ಸೂಕ್ಷವಾಗಿ ಗಮನಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚನೆ ನೀಡಿದ ಎರಡು ವಾರಗಳ ನಂತರ ಪ್ರಕರಣ ದಾಖಲಿಸಿದ್ದು, ಫೇಸ್ ಬುಕ್, ಯೂಟ್ಯೂಬ್ ಸೇರಿದಂತೆ ಒಂಬತ್ತು ಸಂಸ್ಥೆಗಳ ಮೇಲೆ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಬಿಡುಗಡೆಯಾದ ಅವರ ಮಲಯಾಳಂ ಚಿತ್ರ “ರಾಹೇಲ್ ಮಕನ್ ಕೋರಾ” ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ನಕಾರಾತ್ಮಕ ವಿಮರ್ಶೆಗಳು ಹರಿದಾಡುತ್ತಿರುವುದನ್ನು ಕಂಡು ಚಲನಚಿತ್ರ ನಿರ್ದೇಶಕ ಉಬೈನಿ ಇಬ್ರಾಹಿಂ ನೀಡಿದ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, “ಆರೋಮಲಿಂಟೆ ಅದ್ಯಾತೆ ಪ್ರಣಾಯಂ” ಚಿತ್ರದ ನಿರ್ದೇಶಕ ಮುಬೀನ್ ರೌಫ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ವ್ಲಾಗರ್ಗಳ ನಕಾರಾತ್ಮಕ ಪ್ರಚಾರದಿಂದ ತಮ್ಮ ಚಿತ್ರಕ್ಕೆ ನಷ್ಟವಾಗಿದೆ ಈ ನಿಟ್ಟಿನಲ್ಲಿ ಕೋರ್ಟ್ ನ್ಯಾಯ ಕೊಡಿಸಬೇಕು ಎಂದು ಅವರು ಕೋರಿದ್ದರು.
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…