ಬೆಂಗಳೂರು: ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟ ದರ್ಶನ್ ಅಲ್ಲಿನ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪ ಕೇಳಿ ಬಂದಿದೆ. ಜೈಲಿನಲ್ಲಿದ್ದರು ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಈ ಮೂರೂ ಎಫ್ಐಆರ್ಗಳಲ್ಲಿ ದರ್ಶನ್ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.
ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್ಐಆರ್ ಆಗಿದೆ.

