‘ ಅನಿಮಲ್’ ಸಿನಿಮಾದ ನಿರ್ದೇಶಕ ಸಂದೀಪ್ ಕಡೆಯಿಂದ ಬಂದ ಸಿನಿಮಾ ಆಫರನ್ನು ಕಂಗನಾ ರಣಾವತ್ ಬೇಡ ಎಂದಿದ್ದಾರೆ. ಅಷ್ಟಕ್ಕೂ ಯಾಕೆ ಹೀಗಂದ್ರು ಅನ್ನೋದಕ್ಕೆ ಇಲ್ಲಿದೆ ಮಾಹಿತಿ.
ಇತ್ತೀಚೆಗೆ ‘ಅನಿಮಲ್’ ಚಿತ್ರವನ್ನು ನೋಡಿದ ಬಳಿಕ ಕಂಗನಾ ಅವರು ತಮ್ಮ ಅನಿಸಿಕೆ ತಿಳಿಸಿದ್ದರು. ಈ ಸಿನಿಮಾ ಸ್ತ್ರಿ ವಿರೋಧಿಯಾಗಿದೆ ಎಂದು ಅವರು ಹೇಳಿದ್ದರು. ಕಂಗನಾ ಹೇಳಿಕೆಯನ್ನು ಸಂದೀಪ್ ಅವರು ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ ಅವರ ಬಳಿ ಹೋಗಿ ಕಥೆ ಹೇಳುತ್ತೇನೆ. ‘ಕ್ವೀನ್’ ಮತ್ತು ಇತರೆ ಸಿನಿಮಾಗಳಲ್ಲಿ ಅವರ ನಟನೆಯನ್ನು ನಾನು ಇಷ್ಟಪಟ್ಟಿದ್ದೇನೆ. ನನ್ನ ಚಿತ್ರದ ಬಗ್ಗೆ ಅವರು ನೆಗೆಟಿವ್ ಕಾಮೆಂಟ್ ಮಾಡಿದ್ದರೂ ನನಗೆ ಕೋಪ ಬರುವುದಿಲ್ಲ. ಒಟ್ಟಿನಲ್ಲಿ ಅವರ ಪರ್ಫಾರ್ಮೆನ್ಸ್ ನನಗೆ ನಿಜಕ್ಕೂ ಇಷ್ಟವಾಗಿದೆ ಎಂದು ಸಂದೀಪ್ ರೆಡ್ಡಿ ವಂಗಾ ಹೇಳಿದ್ದರು.
ಅನಿಸಿಕೆ ಮತ್ತು ಟೀಕೆ ಎರಡು ಬೇರೆ ಬೇರೆ ಆಗಿರುತ್ತವೆ. ಎಲ್ಲ ಬಗೆಯ ಕಲೆ ಕೂಡ ವಿಮರ್ಶೆಗೆ ಮತ್ತು ಚರ್ಚೆಗೆ ಒಳಪಡಬೇಕು. ಅದು ಸಹಜವಾದ ವಿಷಯ. ಸಂದೀಪ್ ಅವರು ನನ್ನ ವಿಮರ್ಶೆಗೆ ಗೌರವ ನೀಡಿದ್ದು ನೋಡಿದರೆ ತಿಳಿಯುತ್ತದೆ. ಅವರು ಕೇವಲ ಗಂಡಸುತನದ ಸಿನಿಮಾ ಮಾಡುವುದಷ್ಟೇ ಅಲ್ಲ, ಅವರ ಆ್ಯಟಿಟ್ಯೂಡ್ ಕೂಡ ಹಾಗೆಯೇ ಇದೆ. ಧನ್ಯವಾದಗಳು ಸರ್. ಆದರೆ ನೀವು ನನಗೆ ಯಾವುದೇ ಪಾತ್ರ ನೀಡಬೇಡಿ. ನೀಡಿದರೆ ನಿಮ್ಮ ಆಲ್ಫಾ ಮೇಲ್ ಪಾತ್ರಗಳು ಸ್ತ್ರಿವಾದಿ ಆಗಿಬಿಡುತ್ತವೆ. ಆಗ ನಿಮ್ಮ ಸಿನಿಮಾಗಳು ಸೋಲುತ್ತವೆ. ನೀವು ಉತ್ತಮ ಸಿನಿಮಾ ಮಾಡುವವರು. ಇಂಡಸ್ಟ್ರಿಗೆ ನಿಮ್ಮ ಅಗತ್ಯ ಇದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
समीक्षा और निंदा एक नहीं होते, हर तरह की कला की समीक्षा और चर्चा होनी चाहिए यह एक सामान्य बात है ।
संदीप जी ने जैसे मेरी समीक्षा पे मुस्कुराते हुए मेरे प्रति आदर का भाव दिखाया, ये कहा जा सकता है की वो सिर्फ़ मर्दाना फ़िल्में ही नहीं बनाते, उनके तेवर भी मर्दाना हैं, धन्यवाद सर 🙏… https://t.co/qi2hINWYcu— Kangana Ranaut (@KanganaTeam) February 5, 2024