Bengaluru 27°C
Ad

ಜೈಲು ಸೇರಿರೋ ದರ್ಶನ್ ಕುರಿತು ನಾದಬ್ರಹ್ಮ ಹಂಸಲೇಖ ಮಾತು

Hamsaleka

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದಾರೆ. ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಪರ ಚಿತ್ರರಂಗದ ಒಬ್ಬೊಬ್ಬರೇ ಕಲಾವಿದರು ಮುಂದೆ ಒಂದು ಮಾತಾಡುತ್ತಿದ್ದಾರೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ.

Ad
300x250 2

ಈಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದರ್ಶನ್ ಜೈಲು ಸೇರಿರುವ ಬಗ್ಗೆ ಮಂಡ್ಯದಲ್ಲಿ ನಾದಬ್ರಹ್ಮ ಹಂಸಲೇಖ ಪ್ರತಿಕ್ರಿಯಿಸಿದ್ದಾರೆ. ದರ್ಶನ್ ತನ್ನ ಮಗು ಇದ್ದಂತೆ.

ತಂದೆಗೆ ಎಷ್ಟು ನೋವಾಗುತ್ತೋ ಅಷ್ಟೇ ನೋವು ನನಗೂ ಆಗಿದೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ ಎಂದು ಹೇಳಿದ್ದಾರೆ. ಹಂಸಲೇಖ ಹೇಳಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸಿನಿಮಾ ಕಲಾವಿದರು ಸಿಟ್ಟು ಹಾಗೂ ಕೋಪವನ್ನು ಜೀವನದಲ್ಲಿ ರೂಢಿಸಿಕೊಳ್ಳಬಾರದು ಎಂದು ಹಂಸಲೇಖ ಸಲಹೆ ನೀಡಿದ್ದಾರೆ. “ನಾವು ಯೋಚನೆ ಮಾಡಬೇಕು. ಅದರಲ್ಲೂ ನಾನು ಸಿನಿಮಾ ಕಲಾವಿದರು. ನಾನು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷ ಇದೆಯಲ್ಲ ಅದನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌ ಕಣಯ್ಯ. ದ್ವೇಷ ಅಂದರೆ ಅದು ಕ್ಯಾರೆಕ್ಟರ್ ಅಯ್ಯ. ಆತರ ಸಿನಿಮಾದಲ್ಲಿ ತೋರಿಸಬೇಕಷ್ಟೆ. ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದು ಹಂಸಲೇಖ ಹೇಳಿದ್ದಾರೆ.

Ad
Ad
Nk Channel Final 21 09 2023
Ad