Categories: ಮನರಂಜನೆ

ಚುನಾವಣೆಯಲ್ಲಿ ನಿಲ್ಲುವ ನಿರ್ಧಾರ ಮಾಡಿಲ್ಲ: ಡಾಲಿ ಧನಂಜಯ್

ಬೆಂಗಳೂರು:  ಲೋಕಸಭಾ  ಚುನಾವಣೆಯಲ್ಲಿ ಪ್ರತಾಪ್​ ಸಿಂಹ ವಿರುದ್ಧ ಡಾಲಿ ಧನಂಜಯ್ ಸ್ಪರ್ಧಿಸುತ್ತಾರೆ ಎಂಬ ಗಾಳಿಸುದ್ದಿ ಹರಡಿದ್ದು, ಈ ಬಗ್ಗೆ ಧನಂಜಯ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಫೋಟೋ’ ಸಿನಿಮಾದ ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಬಂದಿದ್ದ ಅವರು ಈ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಯಲ್ಲಿ ನಿಲ್ಲುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.

‘ಕಲಾವಿದರಾದ ನಾವು ಎಮೋಷನಲ್​ ಆಗಿರುತ್ತೇವೆ. ಹಾಗಾಗಿ ಕೆಲವು ಬೆಳವಣಿಗೆಗಳಿಗೆ ರಿಯಾಕ್ಟ್​ ಮಾಡಿರುತ್ತೇವೆ. ರಾಜಕಾರಣ ಬೇರೆ, ನಾಯಕನಾಗಿರುವುದು ಬೇರೆ. ಅದಕ್ಕೆ ಅದರದ್ದೇ ಆದಂತಹ ಗುಣಗಳು ಇರುತ್ತವೆ. ಅದನ್ನೆಲ್ಲ ನಿಭಾಯಿಸುವ ಶಕ್ತಿ ಇರಬೇಕು. ಅದಕ್ಕೆಲ್ಲ ಸದ್ಯಕ್ಕೆ ನಾನು ಸಿದ್ಧನಿಲ್ಲ’ ಎಂದು ಡಾಲಿ ಹೇಳಿದ್ದಾರೆ.

ಒಂದು ವೇಳೆ ಆಫರ್​ ಬಂದರೆ ರಾಜಕೀಯಕ್ಕೆ ಹೋಗುತ್ತೀರಾ ಎಂದು ಕೇಳಿದ್ದಕ್ಕೆ ‘ಖಂಡಿತಾ ಇಲ್ಲ’ ಎಂದು ಅವರು ಉತ್ತರಿಸಿದ್ದಾರೆ.

‘ನೀವು ಗಮನಿಸಿರಬಹುದು. ಬೇರೆ ಅಭ್ಯರ್ಥಿಗಳ ಪರವಾಗಿ ನಾನು ಚುನಾವಣಾ ಪ್ರಚಾರಗಳಿಗೆ ಹೋಗಿಲ್ಲ. ಯಾರೂ ಕರೆದಿಲ್ಲ ಅಂತೇನೂ ಇಲ್ಲ. ನನಗೂ ಎಲ್ಲ ಪಕ್ಷಗಳಲ್ಲಿ ಗೆಳೆಯರು ಇದ್ದಾರೆ. ಕರೆದಿದ್ದರೂ ಕೂಡ ನಾನು ಎಲೆಕ್ಷನ್​ ಪ್ರಚಾರಕ್ಕೆ ಹೋಗಿಲ್ಲ. ಯಾಕೆಂದರೆ, ಅದರಲ್ಲಿ ತೊಡಗಿಕೊಳ್ಳಲು ನನಗೆ ಇಷ್ಟ ಇಲ್ಲ. ನಾನು ಕಾಮನ್​ ಮ್ಯಾನ್​ ಆಗಿ ಇರಲು ಇಷ್ಟಪಡುತ್ತೇನೆ ಡಾಲಿ ಹೇಳಿದ್ದಾರೆ.

‘ರಾಜಕಾರಣ ನನಗೆ ಗೊತ್ತಿಲ್ಲ. ಸಮಾಜದಲ್ಲಿ ಕೆಳಗೆ ಇರುವ ಜನರನ್ನು ಮೇಲಕ್ಕೆ ಎತ್ತುವ ಕೆಲಸ ಮಾಡುವವನೇ ಒಳ್ಳೆಯ ನಾಯಕ. ಅವರು ಯಾವ ಪಕ್ಷದಲ್ಲಾದರೂ ಇರಲಿ. ಅವರಿಗೆ ಸ್ಪಂದಿಸುವವರೆಲ್ಲ ಒಳ್ಳೆಯ ಪ್ರಜೆಗಳು’ ಎಂದು ಡಾಲಿ ಧನಂಜಯ್​ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಲಿಡ್ಕರ್​ ಉತ್ಪನ್ನಗಳಿಗೆ ಧನಂಜಯ್​ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಇತ್ತೀಚೆಗೆ ಬಜೆಟ್​ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಡಾಲಿ ಬರೆದ ಸಾಲುಗಳನ್ನು ಓದಿದ್ದರು. ಈ ಎಲ್ಲ ಕಾರಣಗಳಿಂದಾಗಿ ಧನಂಜಯ್​ ಹೆಸರು ರಾಜಕೀಯ ವಲಯದಲ್ಲಿ ಹೆಚ್ಚು ಕೇಳಿಬರಲು ಆರಂಭಿಸಿದೆ. ತಮ್ಮ ಬಗ್ಗೆ ಹಬ್ಬಿದ್ದ ಗಾಸಿಪ್​ಗಳಿಗೆ ಅವರು ಉತ್ತರ ನೀಡಿದ್ದಾರೆ.

Ashika S

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

6 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

22 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

41 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

43 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

58 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

1 hour ago