ನವದೆಹಲಿ: ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಭರ್ಜರಿ ಸಿದ್ದತೆಗಳು ಶುರುವಾಗಿವೆ. ರಾಮ ವಿಗ್ರಹ ಪ್ರಾಣಪ್ರತಿಷ್ಠಾಪನೆಗೆ ಬಾಲಿವುಡ್ ತಾರೆಯರು, ರಾಜಕಾರಣಿಗಳು ಹಾಗೂ ಹಲವು ಗಣ್ಯರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ.
ಇದೀಗ ಈ ದಿನದಂದು ಬಾಲಿವುಡ್ ನಟಿ, ಬಿಜೆಪಿ ನಾಯಕಿ ಹೇಮಾ ಮಾಲಿನಿ ರಾಮಾಯಣ ಆಧಾರಿತ ನೃತ್ಯ, ನಾಟಕವನ್ನು ಅಯೋಧ್ಯೆಯ ರಾಮಮಂದಿರ ದೇವಸ್ಥಾನದಲ್ಲಿ ಪ್ರಸ್ತುತಪಡಿಸಲಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಸಕಲ ಸಿದ್ದತೆ ನಡೆಸುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಜನರು ಹಲವು ವರ್ಷಗಳಿಂದ ಕಾಯುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ಬರುತ್ತಿದೆ. ನಾನು ಈ ಕಾರ್ಯಕ್ರಮಕ್ಕೆ ಮೊದಲ ಬಾರಿಗೆ ಅಯೋಧ್ಯೆಗೆ ಬರುತ್ತಿದ್ದೇನೆ. ಜನವರಿ 17ರಂದು ರಾಮಾಯಣ ಆಧಾರಿತ ನೃತ್ಯ ನಾಟಕ ಪ್ರಸ್ತುತಪಡಿಸಲಿದ್ದೇನೆ ಎಂದು ಹೇಳಿದ್ದಾರೆ. ಈ ವಿಡಿಯೋಗೆ ಅಭಿಮಾನಿಗಳು ವಿಧವಿಧವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಎಂದೆಂದಿಗೂ ಸುಂದರ, ಈ ಸುಂದರ ಘಳಿಗೆಗಾಗಿ ನಾವೆಲ್ಲಾ ಕಾಯುತ್ತಿದ್ದೇವೆ ಎಂದಿದ್ದಾರೆ.
अभिनेत्री और सांसद हेमामालिनी ने राम मंदिर प्राण प्रतिष्ठा पर कहा, “मैं पहली बार राम मंदिर की प्राणप्रतिष्ठा के समय अयोध्या आ रही हूं, जिसका लोग वर्षों से इंतजार कर रहे थे…17 जनवरी को मैं अयोध्या धाम में रामायण पर आधारित एक नृत्य नाटक प्रस्तुत करूंगी”#HemaMalini… pic.twitter.com/oMVazWMyMu
— Mandaleshwar Singh 🇮🇳 (@MandaleshwarIN) January 14, 2024