ಜೈಲರ್ ಹೆಸರಿನ ಹೊಸ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಜನೀಕಾಂತ್ ನಟಿಸಿದ್ದು ಸಿನಿಮಾದಲ್ಲಿ ರಜನೀಕಾಂತ್ ಜೊತೆಗೆ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಇದ್ದಾರೆ. ಇವರಿಬ್ಬರೇ ಅಲ್ಲದೆ, ಬೇರೆ-ಬೇರೆ ಚಿತ್ರರಂಗದ ಸ್ಟಾರ್ ನಟರುಗಳು ಈ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದು ಕೆಲವೇ ದಿನಗಳಲ್ಲಿ ‘ಜೈಲರ್’ ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಸಿನಿಮಾದ ಹೆಸರು ಈಗ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಹೆಸರು ಬದಲಿಸುವಂತೆ ನೆರೆಯ ಚಿತ್ರರಂಗದವರಿಂದ ಒತ್ತಾಯ ಕೇಳಿಬಂದಿದೆ.
ರಜನೀಕಾಂತ್ ಜೈಲರ್ ಪಾತ್ರದಲ್ಲಿ ನಟಿಸಿರುವ ಕಾರಣ ‘ಜೈಲರ್’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ. ಆದರೆ ಮಲಯಾಳಂ ಚಿತ್ರರಂಗದ ನಿರ್ಮಾಒಕ ಹಾಗೂ ನಿರ್ದೇಶಕರೊಬ್ಬರು ಸಿನಿಮಾದ ಹೆಸರಿನ ಬಗ್ಗೆ ತಕರಾರು ತೆಗೆದಿದ್ದು ಸಿನಿಮಾದ ಹೆಸರು ಬದಲಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ಸಹ ಮಾಡಿ ಸಿನಿಮಾದ ಹೆಸರನ್ನು ಬದಲಾಯಿಸಬೇಕು, ಕನಿಷ್ಟ ಕೇರಳದಲ್ಲಿಯಾದರೂ ಬೇರೆ ಹೆಸರಿನೊಂದಿಗೆ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.
‘ಜೈಲರ್’ ಹೆಸರಿನ ಮಲಯಾಳಂ ಸಿನಿಮಾ ಒಂದು ಬಿಡುಗಡೆಗೆ ತಯಾರಾಗಿದೆ. ಮಲಯಾಳಂನ ‘ಜೈಲರ್’ ಸಿನಿಮಾದಲ್ಲಿ ಧ್ಯಾನ್ ಶ್ರೀನಿವಾಸನ್ ನಟಿಸಿದ್ದು ಸಿನಿಮಾವನ್ನು ಸಕ್ಕಿರ್ ಮದತ್ತಿಲ್ ನಿರ್ದೇಶನ ಮಾಡಿದ್ದಾರೆ. ಎನ್ಕೆ ಮೊಹಮ್ಮದ್ ನಿರ್ಮಾಣ ಮಾಡಿದ್ದಾರೆ. ತಮಿಳಿನ ‘ಜೈಲರ್’ ಹಾಗೂ ಮಲಯಾಳಂ ‘ಜೈಲರ್’ ಸಿನಿಮಾಗಳ ಕತೆಗಳು ಒಂದಕ್ಕೊಂದು ಬಹಳ ಭಿನ್ನವಾಗಿದೆಯಾದರೂ ಸಿನಿಮಾದ ಹೆಸರುಗಳು ಒಂದೇ ಆಗಿವೆ. ಹಾಗಾಗಿ ಮಲಯಾಳಂ ‘ಜೈಲರ್’ ಚಿತ್ರತಂಡ ತಮಿಳು ‘ಜೈಲರ್’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ಗೆ ಮನವಿ ಮಾಡಿದ್ದು, ಕನಿಷ್ಟ ಕೇರಳದಲ್ಲಿಯಾದರೂ ಸಿನಿಮಾದ ಹೆಸರು ಬದಲಿಸಿ ಬಿಡುಗಡೆ ಮಾಡಿ ಎಂದಿದೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…