News Karnataka Kannada
Saturday, May 18 2024
ಮನರಂಜನೆ

ನಿರ್ದೇಶಕ ವಿಆರ್​ ಭಾಸ್ಕರ್​ ಅನಾರೋಗ್ಯದಿಂದ ನಿಧನ

Photo Credit : News Kannada

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಿರ್ದೇಶಕ, ಸಂಭಾಷಣಕಾರ, ಗೀತ ಸಾಹಿತಿ ವಿ.ಆರ್​. ಭಾಸ್ಕರ್​ ಅವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ಮೈಸೂರಿನಲ್ಲಿ ಇಂದು (ಸೆ.14) ವಿಧಿವಶರಾಗಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಹೊಂದಿದ್ದ ಭಾಸ್ಕರ್​ ಅವರು ಡಾ. ವಿಷ್ಣುವರ್ಧನ್​ ಅವರ ಜೊತೆ ಒಡನಾಟ ಹೊಂದಿದ್ದರು.

ನಟನಾಗಿಯೂ ಅವರು ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಇತ್ತೀಚಿನ ವರ್ಷಗಳಲ್ಲಿ ವಿ.ಆರ್​. ಭಾಸ್ಕರ್​ ಅವರ ಜೀವನದಲ್ಲಿ ಕಷ್ಟ ಆವರಿಸಿತ್ತು. ಕೆಲವೇ ದಿನಗಳ ಹಿಂದೆ ಪತ್ನಿ ಮತ್ತು ಮಗನನ್ನು ಕೂಡ ಅವರು ಅನಾರೋಗ್ಯದಿಂದ ಕಳೆದುಕೊಂಡಿದ್ದರು. ಮೈಸೂರಿನಲ್ಲೇ ವಿ.ಆರ್​. ಭಾಸ್ಕರ್​ ಅಂತ್ಯಕ್ರಿಯೆ ನಡೆಯಲಿದೆ.

ವಿ.ಆರ್​. ಭಾಸ್ಕರ್ ಅವರಿಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಾಗಿದ್ದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ತಾಯಿಯು ಚಾಮುಂಡಿ ಬೆಟ್ಟದ ಬಳಿ ಇರುವ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ನಡೆಸಲಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು