ಕುಂದಾಪುರ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅವರ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಸಹಯೋಗದೊಂದಿಗೆ ಆರೋಗ್ಯ ಶಿಕ್ಷಣ ಮಾಹಿತಿ ಯಕ್ಷಗಾನ ಕಾರ್ಯಕ್ರಮ ಗಂಗೊಳ್ಳಿ ಮ್ಯಾಂಗನೀಸ್ ರಸ್ತೆ ವಠಾರದಲ್ಲಿ ಬುಧವಾರ ನಡೆಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಬಿ.ರಾಘವೇಂದ್ರ ಪೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಗ್ರಾಪಂ ಲೆಕ್ಕಸಹಾಯಕ ಶೇಖರ ಜಿ, ಸಿಎಚ್ಒ ನಯನಾ, ಕಿರಿಯ ಆರೋಗ್ಯ ಸಹಾಯಕಿಯರಾದ ಪ್ರಜ್ವಲಾ, ಶ್ರೀದೇವಿ,ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ವ್ಯಂಗ್ಯ ಚಿತ್ರಕಾರ ಜಿ.ಬಿ.ಕಲೈಕಾರ್, ಆಶಾ ಕಾರ್ಯಕರ್ತೆಯರು, ಸ್ಥಳೀಯರು ಉಪಸ್ಥಿತರಿದ್ದರು.
ಬೈಂದೂರು ತೊಂಡೆಮಕ್ಕಿ ಶಾರದಾಂಬ ಟ್ರಸ್ಟ್ನ ಕಲಾವಿದರು ಯಕ್ಷಗಾನದ ಮೂಲಕ ಆರೋಗ್ಯ ಶಿಕ್ಷಣ ಮಾಹಿತಿ ನೀಡಿದರು.