ಚೆನ್ನೈ: ತಂದೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಅನೇಕ ನಟಿಯರು ಈಗಾಗಲೇ ಹೇಳಿಕೊಂಡಿದ್ದಾರೆ. ಅಂತೆಯೇ ‘ರಣಧೀರ’ ಸಿನಿಮಾ ನಟಿ ಖುಷ್ಬೂ ಸುಂದರ್ ಕೂಡ 8ನೇ ವಯಸ್ಸಿಗೆ ತಂದೆ ಮಾಡಿದ ಕೃತ್ಯದ ಬಗ್ಗೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
ಹೌದು. . “ಬಾಲ್ಯದಲ್ಲಿ ಏನಾದರೂ ದೌರ್ಜನ್ಯ ನಡೆದರೆ ಮಕ್ಕಳು ಅದನ್ನು ಜೀವನಪರ್ಯಂತ ನೆನಪಿಟ್ಟುಕೊಳ್ಳುತ್ತಾರೆ. ಅದು ಹುಡುಗ ಆಗಿರಬಹುದು, ಹುಡಿಗಿ ಆಗಿರಬಹುದು. ನನ್ನ ತಾಯಿ ಮದುವೆ ಜೀವನ ತುಂಬ ಕೆಟ್ಟದಾಗಿತ್ತು. ಬಹುಶಃ ಪುರುಷ ತನ್ನ ಪತ್ನಿ, ಮಗಳಿಗೆ ಹೊಡೆಯೋದು ಜನ್ಮಸಿದ್ಧ ಹಕ್ಕು ಎಂದುಕೊಂಡಿರಬಹುದು. ನನಗೆ 8ನೇ ವಯಸ್ಸಿದ್ದಾಗ ದೌರ್ಜನ್ಯ ಶುರುವಾಗಿದ್ದು, ನಾನು 15ನೇ ವಯಸ್ಸಿಗೆ ಅದರ ವಿರುದ್ಧ ಮಾತನಾಡಲು ಆರಂಭಿಸಿದೆ ಎಂದು ಖುಷ್ಬೂ ಸುಂದರ್ ಹೇಳಿಕೊಂಡಿದ್ದಾರೆ.
ನಾನು ನನ್ನ ಮೇಲೆ, ತಾಯಿ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡುವ ಸಮಯ ಬಂದಿತ್ತು, ಆದರೆ ಇದರಿಂದ ಇನ್ನೊಂದಿಷ್ಟು ಸಮಸ್ಯೆ ಆಗತ್ತೆ ಅಂತ ಕುಟುಂಬಸ್ಥರು ನನ್ನ ಬಾಯಿ ಮುಚ್ಚಿಸಿದರು ಎಂದಿರುವ ಖುಷ್ಬೂ ಸುಂದರ್ ಅವರು, “ನನ್ನ ಪತಿಯೇ ದೇವರು ಎಂದು ನಂಬಿಕೊಂಡಿದ್ದ ನನ್ನ ತಾಯಿ, ನನ್ನ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಂಬೋದಿಲ್ಲ ಎನ್ನುವ ಭಯ ಎದ್ದಿತ್ತು. ಆದರೆ 15ನೇ ವಯಸ್ಸಿಗೆ ಸಾಕು ಇದು, ಮಾತನಾಡೋಣ ಅಂತ ನಾನು ಫಿಕ್ಸ್ ಆಗಿದ್ದೆ. ನನ್ನ ತಂದೆಗೆ ನನ್ನ ಮೇಲಿದ್ದಿದ್ದು ಪ್ರೀತಿಯಲ್ಲ, ಕಾಮ ಅಷ್ಟೆ.
ನನಗೆ 16 ತುಂಬಿರಲಿಲ್ಲ, ಆಗಲೇ ನನ್ನ ತಂದೆ ನಮ್ಮ ಬಳಿ ಇರೋದನ್ನೆಲ್ಲ ತೆಗೆದುಕೊಂಡು ಮನೆ ಬಿಟ್ಟು ಹೋದರು. ನಮ್ಮ ಮುಂದಿನ ಊಟ ಎಲ್ಲಿಂದ ಬರುತ್ತದೆ ಅಂತ ಕೂಡ ಗೊತ್ತಿರಲಿಲ್ಲ” ಎಂದಿದ್ದಾರೆ ಖುಷ್ಬೂ ಸುಂದರ್.
ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…
ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್ಪಿ ಕಚೇರಿಗೆ ಬಂದಿದ್ದು,…
ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್ ಆಫ್ ಎಂಜಿನಿಯರಿಂಗ್ ಪುಣೆಯ (COEP) ಹಾಸ್ಟೆಲ್ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್ನ ಎಲ್ಲ ವಿದ್ಯಾರ್ಥಿನಿಯರು…
ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…
ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…